ಬೆಂಗಳೂರು: ಐಶ್ವರ್ಯ ಗೌಡ ಕೇಸ್ನಲ್ಲಿ ನಿಖಿಲ್, ಅನಿತಾ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಆಗುತ್ತಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ರಾಜ್ಯದಲ್ಲಿ ಚಿನ್ನ, ಬೆಳ್ಳಿ ಕೇಸ್ ನಡೆಯುತ್ತಿದೆ. ನಿಖಿಲ್, ಅನಿತಾ ಕುಮಾರಸ್ವಾಮಿ ಪರಿಚಯ ಅಂತ ಹೇಳಿ ನಿನ್ನೆ ಮೊನ್ನೆಯಿಂದ ಸುದ್ದಿ ಬರುತ್ತಿದೆ. ಐಶ್ವರ್ಯ ಗೌಡ ನಿಖಿಲ್, ಅನಿತಾ ಅವರನ್ನ ಯಾವಾಗ ಭೇಟಿ ಮಾಡಿದ್ರು? ಈ ಸರ್ಕಾರದಲ್ಲಿ ಎಷ್ಟರ ಮಟ್ಟಿಗೆ ತನಿಖೆ ನಡೆಯುತ್ತಿದೆ ಅನ್ನೋದು ಗೊತ್ತಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಕೇಸ್ ಹಿನ್ನೆಲೆ ತಿಳಿದಿಕೊಂಡಿದ್ದೇನೆ ಎಂದರು.
2016ರಲ್ಲಿ ದೂರು ಕೊಟ್ಟಿರೋದು, ವ್ಯವಹಾರ ನಡೆದಿರೋದು. ನಿಖಿಲ್, ಅನಿತಾ ಹೆಸರನ್ನು ಇದರಲ್ಲಿ ಎಳೆದಿದ್ದಾರೆ ಅಂತ ಮಾಹಿತಿ ತರಿಸಿದ್ದೇನೆ. ಈ ಸರ್ಕಾರ ಯಾರನ್ನು, ಯಾವಾಗ, ಏನು ಬೇಕಾದ್ರು ಮಾಡುತ್ತಾರೆ. ಸರ್ಕಾರದಲ್ಲಿ ಅಧಿಕಾರ ವರ್ಗವನ್ನು ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. 2016ರಲ್ಲಿ ಪ್ರಕರಣ ಆಗಿರೋದು. 2018ರಲ್ಲಿ ನಾನೇ ಸಿಎಂ ಇದ್ದೆ. ಆಗ ಯಾಕೆ ನನ್ನ ಬಳಿ ಅನ್ಯಾಯ ಅಂತ ಇವರು ಬರಲಿಲ್ಲ ದೂರು ಕೊಡಲಿಲ್ಲ ಎಂದು ಪ್ರಶ್ನಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…