ಬೆಂಗಳೂರು: ಐಶ್ವರ್ಯ ಗೌಡ ಕೇಸ್ನಲ್ಲಿ ನಿಖಿಲ್, ಅನಿತಾ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಆಗುತ್ತಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ರಾಜ್ಯದಲ್ಲಿ ಚಿನ್ನ, ಬೆಳ್ಳಿ ಕೇಸ್ ನಡೆಯುತ್ತಿದೆ. ನಿಖಿಲ್, ಅನಿತಾ ಕುಮಾರಸ್ವಾಮಿ ಪರಿಚಯ ಅಂತ ಹೇಳಿ ನಿನ್ನೆ ಮೊನ್ನೆಯಿಂದ ಸುದ್ದಿ ಬರುತ್ತಿದೆ. ಐಶ್ವರ್ಯ ಗೌಡ ನಿಖಿಲ್, ಅನಿತಾ ಅವರನ್ನ ಯಾವಾಗ ಭೇಟಿ ಮಾಡಿದ್ರು? ಈ ಸರ್ಕಾರದಲ್ಲಿ ಎಷ್ಟರ ಮಟ್ಟಿಗೆ ತನಿಖೆ ನಡೆಯುತ್ತಿದೆ ಅನ್ನೋದು ಗೊತ್ತಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಕೇಸ್ ಹಿನ್ನೆಲೆ ತಿಳಿದಿಕೊಂಡಿದ್ದೇನೆ ಎಂದರು.
2016ರಲ್ಲಿ ದೂರು ಕೊಟ್ಟಿರೋದು, ವ್ಯವಹಾರ ನಡೆದಿರೋದು. ನಿಖಿಲ್, ಅನಿತಾ ಹೆಸರನ್ನು ಇದರಲ್ಲಿ ಎಳೆದಿದ್ದಾರೆ ಅಂತ ಮಾಹಿತಿ ತರಿಸಿದ್ದೇನೆ. ಈ ಸರ್ಕಾರ ಯಾರನ್ನು, ಯಾವಾಗ, ಏನು ಬೇಕಾದ್ರು ಮಾಡುತ್ತಾರೆ. ಸರ್ಕಾರದಲ್ಲಿ ಅಧಿಕಾರ ವರ್ಗವನ್ನು ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. 2016ರಲ್ಲಿ ಪ್ರಕರಣ ಆಗಿರೋದು. 2018ರಲ್ಲಿ ನಾನೇ ಸಿಎಂ ಇದ್ದೆ. ಆಗ ಯಾಕೆ ನನ್ನ ಬಳಿ ಅನ್ಯಾಯ ಅಂತ ಇವರು ಬರಲಿಲ್ಲ ದೂರು ಕೊಡಲಿಲ್ಲ ಎಂದು ಪ್ರಶ್ನಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…