ಮೈಸೂರು,: ಭಾರತೀಯ ಜನತಾ ಪಕ್ಷವೂ ಉಗ್ರರ ವಿರುದ್ದ ಒಂದೋ, ಎರಡೋ ಸರ್ಜಿಕಲ್ ಸ್ಟ್ರೈಕ್ ಮಾಡಿ ಬೀಗುತ್ತಿದ್ದಾರೆ. ಮಾತ್ರವಲ್ಲದೇ ತಾವೇ ಸರ್ಜಿಕಲ್ ಸ್ಟ್ರೈಕ್ ನ್ನು ಮಾಡಿದಂತೆ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ನಮ್ಮ ಆಡಳಿತ ಅವಧಿಯಲ್ಲೂ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದೆವು. ಆದರೆ ಈ ಬಗ್ಗೆ ನಮಗೆ ಪ್ರಚಾರ ಆಗತ್ಯವಿರಲಿಲ್ಲ. ಯುಪಿಎ ಅವಧಿಯಲ್ಲಿ ಎರಡು ಮೂರಲ್ಲ ಸುಮಾರು 12-13 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮಾಜಿ ಪ್ರಧಾನಿ, ದಿವಂಗತೆ ಇಂದಿರಾ ಗಾಂಧಿ ಸರ್ಕಾರದ ಅವಧಿಯಲ್ಲಿ ಬಾಂಗ್ಲಾ ಯುದ್ಧದಲ್ಲಿ ಪಾಕಿಸ್ತಾನ ಶರಣಾಗಿದ್ದು ಗೊತ್ತಿಲ್ಲವಾ? ಅದಕ್ಕಿಂತಲು ದೊಡ್ಡದಾ ಈ ಸರ್ಜಿಕಲ್ ಸ್ಟ್ರೈಕ್? ದೇಶದ ರಕ್ಷಣೆ ವಿಚಾರವನ್ನು ಕಾಂಗ್ರೆಸ್ ಯಾವತ್ತೂ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಬಿಜೆಪಿಯವರು ಯಾವತ್ತೂ ಅಭಿವೃದ್ಧಿ ವಿಚಾರದಲ್ಲಿ ರೈತರ ವಿಚಾರದಲ್ಲಿ ಮತ ಕೇಳಿದ್ದಾರಾ? ಭಾವನಾತ್ಮಕ ವಿಚಾರ ಇಟ್ಟುಕೊಂಡು ಅವರು ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು
ಬಿಜೆಪಿಯೂ ಎಂದಿಗೂ ಅಭಿವೃದ್ಧಿ ವಿಚಾರದಲ್ಲಿ ಮತ ಕೇಳಿಲ್ಲ, ರೈತರ ವಿಚಾರವನ್ನು ಮುಂದಿಟ್ಟುಕೊಂಡು ಮತ ಯಾಚಿಸಿಲ್ಲ. ಯಾಕೆಂದರೆ ಅವರಿಗೆ ಅಭಿವೃದ್ದಿ ಬೇಕಿಲ್ಲ. ಭಾವನಾತ್ಮಕ ವಿಚಾರಗಳನ್ನು ದಾಳವಾಗಿ ಬಳಸಿ ಮತ ಗಳಿಸೋದು ಬಿಜೆಪಿ ತಂತ್ರ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…