Featured

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ – vishwanews24

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌

ಬೆಂಗಳೂರು: ತುಮಕೂರಿನಲ್ಲಿ ನಾಳೆ ರಾಜ್ಯ ಕಾಂಗ್ರೆಸ್‌ ಸರ್ಕಾರದ  ಸಾಧನಾ ಸಮಾವೇಶ ನಡೆಯಲಿದೆ. ಇದೇ ಸಮಾವೇಶದಲ್ಲಿ 1.52 ಲಕ್ಷ ಫಲಾನುಭವಿಗಳಿಗೆ ಸರ್ಕಾರದ ವತಿಯಿಂದ ಹಕ್ಕುಪತ್ರ ವಿತರಣೆ ಮಾಡಲಿದ್ದೇವೆ ಎಂದು ಗೃಹಸಚಿವ ಜಿ. ಪರಮೇಶ್ವರ್‌ ತಿಳಿಸಿದರು.

ಮೇ 19 ರಂದು ರಾಜ್ಯ ಕಾಂಗ್ರೆಸ್‌ ಸರ್ಕಾರ ಮೂರು ವರ್ಷ ಪೂರೈಸಲಿದೆ. ಈ ಹಿನ್ನೆಲೆ ತುಮಕೂರಿನಲ್ಲಿ ಸರ್ಕಾರದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆ ಸರ್ಕಾರದ ಸಮಾವೇಶ ಇದೆ. ಇದೇ ಸಮಾವೇಶದಲ್ಲಿ ಸರ್ಕಾರದಿಂದ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ಕೊಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ:

ಸರ್ಕಾರ ಬಂದು ಮೂರು ವರ್ಷ ಆಯ್ತು. ನಾವು ಅನೇಕ ಭರವಸೆ ಕೊಟ್ಟಿದ್ವಿ, ಈ ಮೂರು ವರ್ಷದಲ್ಲಿ ಏನೇನು ಈಡೇರಿಸಿದೀವಿ ಅಂತ ತಿಳಿಸ್ತೇವೆ ಎಂದರು.

ಇನ್ನೂ ಸಮಾವೇಶದಲ್ಲಿ ಪರಮೇಶ್ವರ್ ಶಕ್ತಿ ಪ್ರದರ್ಶನ ಎಂಬ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಲ್ಲಿ ಯಾರ ಶಕ್ರಿ ಪ್ರದರ್ಶನವೂ ಇಲ್ಲ. ಸರ್ಕಾರದ ಕಾರ್ಯಕ್ರಮ ಜಾರಿ ಬಗ್ಗೆ ಮಾತ್ರ ಸಮಾವೇಶ ಮಾಡುತ್ತಿದ್ದೇವೆ. ವೈಯಕ್ತಿಕವಾಗಿ ನನಗಾಗಲಿ, ಬೇರೆಯವರಿಗಾಗಲಿ ಇದನ್ನ ಆ ರೀತಿ ನೋಡಲ್ಲ. ಈ ಸಮಾವೇಶವನ್ನ ಶಕ್ತಿ ಪ್ರದರ್ಶನ ಅಂತ ನೋಡಲ್ಲ. ನುಡಿದಂತೆ ನಡೆದಿದ್ದೇವೆ ಅಂತ ಹೇಳಲು ಹೊರಟಿದ್ದೇವೆ ಅಷ್ಟೇ. ಇದು ಸರ್ಕಾರದ ಕಾರ್ಯಕ್ರಮ ಪಕ್ಷದ ಕಾರ್ಯಕ್ರಮ ಅಲ್ಲ. ಹಾಗಾಗಿ ಹೈಕಮಾಂಡ್ ನಾಯಕರನ್ನು ಕರೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:

ಸಮಾವೇಶ ಬಳಿಕ ಸರ್ಕಾರದಲ್ಲಿ ಬದಲಾವಣೆ ವಿಚಾರ, ಬದಲಾವಣೆ ಬೇರೆ ವಿಚಾರ, ಅದೇ ಬೇರೆ ನಾವಿಲ್ಲಿ ಅಭಿವೃದ್ಧಿ ದೃಷ್ಟಿಯಿಂದ ಸಮಾವೇಶ ಮಾಡ್ತಿದೀವಿ. ಅದೆಲ್ಲ ಪಕ್ಷದ ಆಂತರಿಕ ವಿಚಾರ, ಅದನ್ನ ಇದರ ಜತೆ ಬೆರೆಸಲು ಹೋಗೋದಿಲ್ಲ ಎಂದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

20 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

20 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

21 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

21 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

22 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

23 hours ago