Featured

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ – vishwanews24

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌

ಬೆಂಗಳೂರು: ತುಮಕೂರಿನಲ್ಲಿ ನಾಳೆ ರಾಜ್ಯ ಕಾಂಗ್ರೆಸ್‌ ಸರ್ಕಾರದ  ಸಾಧನಾ ಸಮಾವೇಶ ನಡೆಯಲಿದೆ. ಇದೇ ಸಮಾವೇಶದಲ್ಲಿ 1.52 ಲಕ್ಷ ಫಲಾನುಭವಿಗಳಿಗೆ ಸರ್ಕಾರದ ವತಿಯಿಂದ ಹಕ್ಕುಪತ್ರ ವಿತರಣೆ ಮಾಡಲಿದ್ದೇವೆ ಎಂದು ಗೃಹಸಚಿವ ಜಿ. ಪರಮೇಶ್ವರ್‌ ತಿಳಿಸಿದರು.

ಮೇ 19 ರಂದು ರಾಜ್ಯ ಕಾಂಗ್ರೆಸ್‌ ಸರ್ಕಾರ ಮೂರು ವರ್ಷ ಪೂರೈಸಲಿದೆ. ಈ ಹಿನ್ನೆಲೆ ತುಮಕೂರಿನಲ್ಲಿ ಸರ್ಕಾರದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆ ಸರ್ಕಾರದ ಸಮಾವೇಶ ಇದೆ. ಇದೇ ಸಮಾವೇಶದಲ್ಲಿ ಸರ್ಕಾರದಿಂದ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ಕೊಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ:

ಸರ್ಕಾರ ಬಂದು ಮೂರು ವರ್ಷ ಆಯ್ತು. ನಾವು ಅನೇಕ ಭರವಸೆ ಕೊಟ್ಟಿದ್ವಿ, ಈ ಮೂರು ವರ್ಷದಲ್ಲಿ ಏನೇನು ಈಡೇರಿಸಿದೀವಿ ಅಂತ ತಿಳಿಸ್ತೇವೆ ಎಂದರು.

ಇನ್ನೂ ಸಮಾವೇಶದಲ್ಲಿ ಪರಮೇಶ್ವರ್ ಶಕ್ತಿ ಪ್ರದರ್ಶನ ಎಂಬ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಲ್ಲಿ ಯಾರ ಶಕ್ರಿ ಪ್ರದರ್ಶನವೂ ಇಲ್ಲ. ಸರ್ಕಾರದ ಕಾರ್ಯಕ್ರಮ ಜಾರಿ ಬಗ್ಗೆ ಮಾತ್ರ ಸಮಾವೇಶ ಮಾಡುತ್ತಿದ್ದೇವೆ. ವೈಯಕ್ತಿಕವಾಗಿ ನನಗಾಗಲಿ, ಬೇರೆಯವರಿಗಾಗಲಿ ಇದನ್ನ ಆ ರೀತಿ ನೋಡಲ್ಲ. ಈ ಸಮಾವೇಶವನ್ನ ಶಕ್ತಿ ಪ್ರದರ್ಶನ ಅಂತ ನೋಡಲ್ಲ. ನುಡಿದಂತೆ ನಡೆದಿದ್ದೇವೆ ಅಂತ ಹೇಳಲು ಹೊರಟಿದ್ದೇವೆ ಅಷ್ಟೇ. ಇದು ಸರ್ಕಾರದ ಕಾರ್ಯಕ್ರಮ ಪಕ್ಷದ ಕಾರ್ಯಕ್ರಮ ಅಲ್ಲ. ಹಾಗಾಗಿ ಹೈಕಮಾಂಡ್ ನಾಯಕರನ್ನು ಕರೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:

ಸಮಾವೇಶ ಬಳಿಕ ಸರ್ಕಾರದಲ್ಲಿ ಬದಲಾವಣೆ ವಿಚಾರ, ಬದಲಾವಣೆ ಬೇರೆ ವಿಚಾರ, ಅದೇ ಬೇರೆ ನಾವಿಲ್ಲಿ ಅಭಿವೃದ್ಧಿ ದೃಷ್ಟಿಯಿಂದ ಸಮಾವೇಶ ಮಾಡ್ತಿದೀವಿ. ಅದೆಲ್ಲ ಪಕ್ಷದ ಆಂತರಿಕ ವಿಚಾರ, ಅದನ್ನ ಇದರ ಜತೆ ಬೆರೆಸಲು ಹೋಗೋದಿಲ್ಲ ಎಂದರು.

Vishwa News 24

Recent Posts

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

1 hour ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…

1 hour ago

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ – vishwanews24

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು…

1 hour ago

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 days ago