Featured

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಬಿಜೆಪಿ ಸರ್ಕಾರ ರದ್ದು ಮಾಡುವ ದುರಾಲೋಚನೆ ಮಾಡಿದರೆ ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ : ಸಿದ್ದರಾಮಯ್ಯ -Vishwanews24

ಬೆಂಗಳೂರು : ಕಾಂಗ್ರೆಸ್ ಸರ್ಕಾರದಲ್ಲಿ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಬಿಜೆಪಿ ಸರ್ಕಾರ ರದ್ದು ಮಾಡುವ ದುರಾಲೋಚನೆ ಮಾಡಿದರೆ ಬಡಜನತೆ ದಂಗೆ ಏಳುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ ಸರ್ಕಾರ ರದ್ದುಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡ ಜನತೆ ದಂಗೆ ಏಳಬಹುದು, ಎಚ್ಚರ ಇರಲಿ, ಇಂತಹ ಜನವಿರೋಧಿ ನಿಲುವುಗಳನ್ನು ನಾವು ಸಹಿಸಿಕೊಳ್ಳುವವರಲ್ಲ, ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ 6 ತಿಂಗಳಿನಿಂದ ರಾಜ್ಯ ಸರ್ಕಾರ ಸತತ ಬರ ಹಾಗೂ ನೆರೆಯಿಂದ ತತ್ತರಿಸಿದೆ. ಹೀಗಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳ ಬಳಿ ಸಲಹೆಗಳನ್ನು ಕೇಳಿದ್ದರು. ಈ ಕುರಿತು ಸಲಹೆ ನೀಡಿರುವ ಅಧಿಕಾರಿಗಳು ಮುಖ್ಯಮಂತ್ರಿಯ ಎದುರು ಪಡಿತರ ಅಕ್ಕಿಯಲ್ಲಿ 2 ಕೆ.ಜಿ ಕಡಿತಗೊಳಿಸುವ ಪ್ರಸ್ತಾವವನ್ನು ಮುಂದಿಟ್ಟಿದ್ದಾರೆ.

ಕಾಂಗ್ರೆಸ್ ಕಾಲದಲ್ಲಿ ಜಾರಿಯಾದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ರದ್ದು ಮಾಡಿದರೆ ಕಾಂಗ್ರೆಸ್ ನಾಯಕರು ರಸ್ತೆಗಿಳಿದು ಹೋರಾಟ ಮಾಡುವುದಾಗಿ ಈ ಹಿಂದೆಯೇ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಆದರೆ, ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

32 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

45 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago