ಮೈಸೂರು: ಸಿದ್ದರಾಮಯ್ಯರನ್ನು ಕಾಂಗ್ರೆಸ್ ಕೈ ಬಿಟ್ಟರೂ ನಾವು ಅವರ ಕೈ ಬಿಡಲ್ಲ, ಅವರ ಜೊತೆ ನಾನು ದಿನನಿತ್ಯ ಸಂಪರ್ಕದಲ್ಲಿದ್ದೇನೆ, ಅವರನ್ನು ಆಹ್ವಾನಿಸಿಯೇ ದಸರಾ ಮಾಡುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ. ಅವರು ಕಾಲೆಳೆದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೈಸೂರಿನವರಾಗಿದ್ದು, ಅವರೇ ಅತಿಥಿ. ಕಾಂಗ್ರೆಸ್ ಅವರನ್ನು ಕೈ ಬಿಟ್ಟರು ನಾವು ಬಿಡಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಡಿಕೆಶಿ ಬಂಧನ ಸಮುದಾಯದ ವಿರುದ್ಧ ಎಂಬ ಸುದ್ದಿ ಎಲ್ಲೆಡೆ ಹಬ್ಬಿದ್ದು, ಅದರೆ ನಾನು ಕೂಡ ಒಕ್ಕಲಿಗ ಸಮುದಾಯದವನಾಗಿದ್ದು, ನಾನು ನನ್ನ ಸಮುದಾಯದವರಿಗೆ ಹೇಳುವುದೇನೆಂದರೆ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಭಾವನಾತ್ಮಕವಾಗಿ ಯೋಚನೆ ಮಾಡಬೇಡಿ, ವಾಸ್ತವಿಕವಾಗಿ ಯೋಚನೆ ಮಾಡಿ. ಬಂಧನ ಸಮುದಾಯದ ವಿರುದ್ಧ ಎಂದು ಅಂದುಕೊಳ್ಳುವುದು ತಪ್ಪು ಎಂದರು.
ನನ್ನ ಮನೆಯಲ್ಲಿ 10 ಕೋಟಿ ದುಡ್ಡು ಸಿಕ್ಕರೆ ನಾನು ಪ್ರಾಮಾಣಿಕ ಅಂತಾ ಹೇಳಿಕೊಳ್ಳೋಕೆ ಆಗುತ್ತಾ? ನನ್ನ ಆಸ್ತಿ 18 ಎಕರೆ ಇದೆ. ಅದು 180 ಎಕರೆ ಆದರೆ ಅದಕ್ಕೆ ಉತ್ತರ ಕೊಡಬೇಕು. ಅದು 1880 ಎಕರೆ ಆದರೂ ಜನರಿಗೆ ಉತ್ತರ ಕೊಡಬಾರದು ಅಂದರೆ ಅದು ಕಾನೂನಿಗೂ ತದ್ವಿರುದ್ದ ಎಂದು ಕಿಡಿಕಾರಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…