ಮೈಸೂರು: ಸಿದ್ದರಾಮಯ್ಯರನ್ನು ಕಾಂಗ್ರೆಸ್ ಕೈ ಬಿಟ್ಟರೂ ನಾವು ಅವರ ಕೈ ಬಿಡಲ್ಲ, ಅವರ ಜೊತೆ ನಾನು ದಿನನಿತ್ಯ ಸಂಪರ್ಕದಲ್ಲಿದ್ದೇನೆ, ಅವರನ್ನು ಆಹ್ವಾನಿಸಿಯೇ ದಸರಾ ಮಾಡುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ. ಅವರು ಕಾಲೆಳೆದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೈಸೂರಿನವರಾಗಿದ್ದು, ಅವರೇ ಅತಿಥಿ. ಕಾಂಗ್ರೆಸ್ ಅವರನ್ನು ಕೈ ಬಿಟ್ಟರು ನಾವು ಬಿಡಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಡಿಕೆಶಿ ಬಂಧನ ಸಮುದಾಯದ ವಿರುದ್ಧ ಎಂಬ ಸುದ್ದಿ ಎಲ್ಲೆಡೆ ಹಬ್ಬಿದ್ದು, ಅದರೆ ನಾನು ಕೂಡ ಒಕ್ಕಲಿಗ ಸಮುದಾಯದವನಾಗಿದ್ದು, ನಾನು ನನ್ನ ಸಮುದಾಯದವರಿಗೆ ಹೇಳುವುದೇನೆಂದರೆ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಭಾವನಾತ್ಮಕವಾಗಿ ಯೋಚನೆ ಮಾಡಬೇಡಿ, ವಾಸ್ತವಿಕವಾಗಿ ಯೋಚನೆ ಮಾಡಿ. ಬಂಧನ ಸಮುದಾಯದ ವಿರುದ್ಧ ಎಂದು ಅಂದುಕೊಳ್ಳುವುದು ತಪ್ಪು ಎಂದರು.
ನನ್ನ ಮನೆಯಲ್ಲಿ 10 ಕೋಟಿ ದುಡ್ಡು ಸಿಕ್ಕರೆ ನಾನು ಪ್ರಾಮಾಣಿಕ ಅಂತಾ ಹೇಳಿಕೊಳ್ಳೋಕೆ ಆಗುತ್ತಾ? ನನ್ನ ಆಸ್ತಿ 18 ಎಕರೆ ಇದೆ. ಅದು 180 ಎಕರೆ ಆದರೆ ಅದಕ್ಕೆ ಉತ್ತರ ಕೊಡಬೇಕು. ಅದು 1880 ಎಕರೆ ಆದರೂ ಜನರಿಗೆ ಉತ್ತರ ಕೊಡಬಾರದು ಅಂದರೆ ಅದು ಕಾನೂನಿಗೂ ತದ್ವಿರುದ್ದ ಎಂದು ಕಿಡಿಕಾರಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…