ನವದೆಹಲಿ : ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಯುಪಿಎ ಅವಧಿಯಲ್ಲಿ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟನಿ ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಅದರೊಂದಿಗೆ ಕೇರಳ ಬಿಜೆಪಿಗೆ ಅತಿದೊಡ್ಡ ಬಲ ಸಿಕ್ಕಂತಾಗಿದೆ. ಕೇರಳ ಕಾಂಗ್ರೆಸ್ನ ಮಾಧ್ಯಮ ಸಂಯೋಜಕರಾಗಿದ್ದ ಅನಿಲ್ ಆಂಟನಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗುಜರಾತ್ ಗಲಭೆಯ ಕುರಿತಾಗಿ ಬಿಬಿಸಿ ಮಾಡಿದ್ದ ಸಾಕ್ಷ್ಯಚಿತ್ರವನ್ನು ಬಲವಾಗಿ ವಿರೋಧಿಸಿದ್ದರು.
ಅದರ ಬೆನ್ನಲ್ಲಿಯೇ ಕಾಂಗ್ರೆಸ್ ಪಕ್ಷದಿಂದಲೇ ಅವರು ಟೀಕೆ ಎದುರಿಸಿದ್ದರು. ಇದರಿಂದಾಗಿ ಬೇಸರಗೊಂಡು ಕಾಂಗ್ರೆಸ್ ಪಕ್ಷದ ಎಲ್ಲಾ ಸ್ಥಾನಕ್ಕೂ ರಾಜೀನಾಮೆ ನೀಡಿ ಹೊರಬಂದಿದ್ದ ಅನಿಲ್ ಆಂಟನಿ ಗುರುವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಪೀಯುಷ್ ಗೋಯೆಲ್ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.
ಬಿಜೆಪಿ ಸೇರ್ಪಡೆ ಕಾರ್ಯಕ್ರಮದ ವೇಳೆ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್ ಕೂಡ ಹಾಜರಿದ್ದರು. ಬಿಬಿಸಿ ಸಾಕ್ಷ್ಯಚಿತ್ರ ವಿರೋಧಿ ಅವರು ಮಾಡಿದ್ದ ಟ್ವೀಟ್ಗೆ ಕಾಂಗ್ರೆಸ್ ಕಿಡಿಕಾರಿದ್ದ ಹಿನ್ನಲೆಯಲ್ಲಿ, ಕಳೆದ ಜನವರಿಯಲ್ಲಿ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…