ನವದೆಹಲಿ : ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಯುಪಿಎ ಅವಧಿಯಲ್ಲಿ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟನಿ ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಅದರೊಂದಿಗೆ ಕೇರಳ ಬಿಜೆಪಿಗೆ ಅತಿದೊಡ್ಡ ಬಲ ಸಿಕ್ಕಂತಾಗಿದೆ. ಕೇರಳ ಕಾಂಗ್ರೆಸ್ನ ಮಾಧ್ಯಮ ಸಂಯೋಜಕರಾಗಿದ್ದ ಅನಿಲ್ ಆಂಟನಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗುಜರಾತ್ ಗಲಭೆಯ ಕುರಿತಾಗಿ ಬಿಬಿಸಿ ಮಾಡಿದ್ದ ಸಾಕ್ಷ್ಯಚಿತ್ರವನ್ನು ಬಲವಾಗಿ ವಿರೋಧಿಸಿದ್ದರು.
ಅದರ ಬೆನ್ನಲ್ಲಿಯೇ ಕಾಂಗ್ರೆಸ್ ಪಕ್ಷದಿಂದಲೇ ಅವರು ಟೀಕೆ ಎದುರಿಸಿದ್ದರು. ಇದರಿಂದಾಗಿ ಬೇಸರಗೊಂಡು ಕಾಂಗ್ರೆಸ್ ಪಕ್ಷದ ಎಲ್ಲಾ ಸ್ಥಾನಕ್ಕೂ ರಾಜೀನಾಮೆ ನೀಡಿ ಹೊರಬಂದಿದ್ದ ಅನಿಲ್ ಆಂಟನಿ ಗುರುವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಪೀಯುಷ್ ಗೋಯೆಲ್ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.
ಬಿಜೆಪಿ ಸೇರ್ಪಡೆ ಕಾರ್ಯಕ್ರಮದ ವೇಳೆ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್ ಕೂಡ ಹಾಜರಿದ್ದರು. ಬಿಬಿಸಿ ಸಾಕ್ಷ್ಯಚಿತ್ರ ವಿರೋಧಿ ಅವರು ಮಾಡಿದ್ದ ಟ್ವೀಟ್ಗೆ ಕಾಂಗ್ರೆಸ್ ಕಿಡಿಕಾರಿದ್ದ ಹಿನ್ನಲೆಯಲ್ಲಿ, ಕಳೆದ ಜನವರಿಯಲ್ಲಿ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…