ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರ ಪುತ್ರಿ ರಾಜನಂದಿನಿ ಬುಧವಾರ ಬಿಜೆಪಿ ಪಕ್ಷ ಸೇರ್ಪಡೆಯಾದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.
ಪಕ್ಷ ಸೇರ್ಪಡೆಗೂ ಮುನ್ನ ಯಡಿಯೂರಪ್ಪ ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿದ್ದ ರಾಜನಂದಿನಿ ಕೆಲಕಾಲ ಮಾತುಕತೆ ನಡೆಸಿದ್ದರು.
ರಾಜನಂದಿನಿಗೆ ಕಾಂಗ್ರೆಸ್ ಟಿಕೆಟ್ ವಂಚಿಸಿತ್ತು. ಇಷ್ಟೇ ಅಲ್ಲ ಕಾಗೋಡು ತಿಮ್ಮಪ್ಪ ಅವರಿಗೂ ಟಿಕೆಟ್ ನಿರಾಕರಿಸಲಾಗಿತ್ತು. ಸಾಗರದಿಂದ ಕಾಗೋಡು ತಿಮ್ಮಪ್ಪ ಮತ್ತೆ ಸ್ಪರ್ಧಿಸಲು ಸಜ್ಜಾಗಿದ್ದರು. ವಯಸ್ಸಿನ ಕಾರಣದಿಂದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರೆ ಪುತ್ರಿಗೆ ಟಿಕೆಟ್ ಕೊಡಿಸಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ಕಾಗೋಡು ತಿಮ್ಮಪ್ಪ, ಪುತ್ರಿ ರಾಜನಂದಿನಿ ಬದಲು ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಿದ್ದರು.
ಇದರಿಂದ ಕಾಗೋಡು ಹಾಗೂ ರಾಜನಂದಿನಿ ತೀವ್ರ ಅಸಮಾಧಾನಗೊಂಡಿದ್ದರು. ಇದೀಗ ಕಾಂಗ್ರೆಸ್ ತಮ್ಮನ್ನು ಕಡೆಗಣಿಸುತ್ತಿದೆ ಅನ್ನೋ ಅಸಮಾಧಾನವನ್ನು ರಾಜನಂದಿನಿ ಹೊರಹಾಕಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…