ಮಿರ್ಜಾಪುರ್(ಉತ್ತರ ಪ್ರದೇಶ),: ಈ ಹಿಂದೆ ಆಡಳಿತ ನಡೆಸಿದ ವಿರೋಧ ಪಕ್ಷಗಳ ಸರ್ಕಾರಗಳು ಜನರನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ಅಭಿವೃದ್ಧಿ ಯೋಜನೆಗಳನ್ನು ವಿಳಂಬ ಮಾಡಿದೆವು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ್ನಲ್ಲಿ ಜನಸಾಗರ ಕಾಲುವೆ ಯೋಜನೆ ಉದ್ಘಾಟನೆ ಮತ್ತು ಮಿರ್ಜಾಪುರ್ ಮೆಡಿಕಲ್ ಕಾಲೇಜಿಗೆ ಶಿಲ್ಯಾಸ ನೆರವೇರಿಸಿದ ನಂತರ ಅವರು ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಸೇರದಂತೆ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. ಇಂದು ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ವಿರೋಧ ಪಕ್ಷಗಳು ತಮ್ಮ ಅಧಿಕಾರಾವಧಿಯಲ್ಲಿ ನೀರಾವರಿ ಯೋಜನೆಗಳನ್ನು ಏಕೆ ಪೂರೈಸಲಿಲ್ಲ ಎಂದು ಪ್ರಶ್ನಿಸಿದ ಮೋದಿ, ಇವರು ಅಧಿಕಾರದಲ್ಲಿ ಇರುವಷ್ಟು ಕಾಲ ಅದು ಅಪೂರ್ಣವಾಗಿಯೇ ಇತ್ತು ಎಂದು ಟೀಕಿಸಿದರು. ಯೋಜನೆಗಳನ್ನು ಅಪೂರ್ಣಗೊಳಿಸಿದ್ದೇ ಹಿಂದಿನ ಸರ್ಕಾರಗಳ ಸಾಧನೆ ಎಂದು ಲೇವಟಿ ಮಾಡಿದ ಅವರು, 50 ವರ್ಷಗಳ ಕಾಲ ದೇಶ ಆಳಿದ ಕಾಂಗ್ರೆಸ್ ಪಕ್ಷ ಮಾಡದ ಸಾಧನೆಯನ್ನು ಎನ್ಡಿಎ ಸರ್ಕಾರ ಕೇವಲ ನಾಲ್ಕೇ ವರ್ಷಗಳಲ್ಲಿ ಪೂರ್ಣಗೊಳಿಸಿದೆ ಎಂದು ಮೋದಿ ಹೆಮ್ಮೆಯಿಂದ ಹೇಳಿಕೊಂಡರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…