ರಾಜ್ಯ ನ್ಯೂಸ್

ಕಾಂಗ್ರೇಸಿನಿಂದ ಚುನಾವಣಾ ಪೂರ್ವ ಅಕ್ರಮ : ಬಿಜೆಪಿ ಆರೋಪ; 94 ಕ್ಷೇತ್ರಕ್ಕೆ ಶ್ರಮಶಕ್ತಿಯ 18 ಕೋಟಿ ಹಂಚಿಕೆ….

ಬೆಂಗಳೂರು: ರಾಜ್ಯ ಸರಕಾರ ‘ಶ್ರಮಶಕ್ತಿ ‘ಯೋಜನೆ ಹೆಸರಿನಲ್ಲಿ ಚುನಾವಣಾ ಪೂರ್ವ ಅಕ್ರಮ ನಡೆಸಿದ್ದು, ಕಾಂಗ್ರೆಸ್‌ ಶಾಸಕರಿರುವ 94 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಓಲೈಕೆಗಾಗಿ ತಲಾ 18.75 ಲಕ್ಷ ರೂ. ಹಂಚಿಕೆ ಮಾಡಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. 


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಸಂಸದೆ ಶೋಭಾ ಕರಂದ್ಲಾಜೆ ಈ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದು, ”ನೀತಿ ಸಂಹಿತೆ ಜಾರಿಗೆ ಬಂದ ನಂತರ ಹಣ ಹಂಚುವುದು ಕಷ್ಟವಾಗುತ್ತದೆ ಎಂದು ಸರಕಾರ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಮೂಲಕ ಶ್ರಮ ಶಕ್ತಿ ಯೋಜನೆ ದುರ್ಬಳಕೆ ಮಾಡಿಕೊಂಡಿದೆ. ಆಯೋಗ ತಕ್ಷಣ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು,” ಎಂದು ಆಗ್ರಹಿಸಿದರು. 

”ಈ ಯೋಜನೆಗೆ ಅನಾಮಧೇಯ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸಿನ 94 ಶಾಸಕರನ್ನು ಮಾತ್ರ ಈ ವ್ಯಾಪ್ತಿಗೆ ತರಲಾಗಿದ್ದು, ಉಳಿದ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ಇಲ್ಲವೇ? ಯೋಜನೆಯ ಅನುಷ್ಠಾನಕ್ಕೆ ಸರಕಾರ ಅನುಸರಿಸಿದ ಮಾನದಂಡಗಳೇನು,”ಎಂದು ಪ್ರಶ್ನಿಸಿದರು. 

”ಈ ಯೋಜನೆಯ ಲಾಭ ಪಡೆಯುವುದಕ್ಕೆ ಯಾರು ಅರ್ಹರಿದ್ದಾರೆ ಎಂಬ ಬಗ್ಗೆ ಅಲ್ಪಸಂಖ್ಯಾತರ ಆಯೋಗವೇ ನಿರ್ಧಾರ ಮಾಡಬೇಕು. ಪಟ್ಟಿಯನ್ನು ಅನುಮೋದಿಸುವುದಕ್ಕೆ ಶಾಸಕರಿಗೆ ಯಾವುದೇ ಅಧಿಕಾರವಿಲ್ಲ. ನಿಗಮದ ಜಿಲ್ಲಾ ವ್ಯವಸ್ಥಾಪಕರು ಮಾಡಬೇಕಾದ ಕೆಲಸವನ್ನು ಶಾಸಕರು ಮಾಡಿದ್ದಾರೆ. ಒಟ್ಟಾರೆಯಾಗಿ ಶ್ರಮಶಕ್ತಿ ಯೋಜನೆಯೇ ಅಕ್ರಮದ ಗೂಡಾಗಿದ್ದು, 18 ಕೋಟಿಗೂ ಮೇಲ್ಪಟ್ಟು ಅಕ್ರಮವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಡಹಗಲೇ ಬೊಕ್ಕಸ ಕೊಳ್ಳೆ ಹೊಡೆಯುತ್ತಿದ್ದಾರೆ,” ಎಂದು ಆಪಾದಿಸಿದರು. 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago