ಬೆಂಗಳೂರು: “ಟೀಕೆ ಮಾಡುವುದೇ ವಿಪಕ್ಷ ನಾಯಕರ ಕೆಲಸ. ಆರ್ಎಸ್ಎಸ್ ಎಲ್ಲದಕ್ಕೂ ಕಾರಣ ಎಂದು ಆರೋಪಿಸುತ್ತಿರುತ್ತಾರೆ. ಹಾಗಾದರೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯಾವ ಹಿನ್ನೆಲೆಯಿಂದ ಬಂದಿದ್ದಾರೆ?” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪ್ರಶ್ನಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಲ್ಲದ್ದಕ್ಕೂ ಆರ್ಎಸ್ಎಸ್ ಕಾರಣ ಎಂದು ಆರೋಪ ಮಾಡುತ್ತಿರುತ್ತಾರೆ. ಇಂದು ಈ ಸ್ಥಾನಕ್ಕೆ ಬರಲು ಆರ್ಎಸ್ಎಸ್ ಕಾರಣ. ನಾನು ಅವರ ಐಡಿಯಾಲಜಿಗಳನ್ನು ಕಲಿತಿದ್ದೇನೆ. ನರೇಂದ್ರ ಮೋದಿ ಅವರು ಪ್ರಧಾನಿ ಆಗಲು ಕೂಡಾ ಆರ್ಎಸ್ಎಸ್ ಕಾರಣ. ಈ ವಿಚಾರವನ್ನು ಪ್ರಧಾನಿ ಮೋದಿ ಅವರೇ ಹೇಳಿಕೊಂಡಿದ್ದಾರೆ. ಹಾಗಿದ್ದಲ್ಲಿ ಸಿದ್ದರಾಮಯ್ಯ ಅವರ ಹಿನ್ನೆಲೆ ಏನು?” ಎಂದು ಕೇಳಿದರು.
ಸಿಡಿ ಪ್ರಕರಣ : ಪೊಲೀಸ್ ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಹಳ್ಳಿ -Vishwanews24
“ಮೊದಲು ಪಕ್ಷದಲ್ಲಿರುವ ಆಂತರಿಕ ಗೊಂದಲಗಳು ನಿವಾರಣೆಯಾಗಬೇಕು. ಎಷ್ಟು ಬಾರಿ ಇವರು ಆರ್ಎಸ್ಎಸ್ನ ಬಗ್ಗೆ ಟೀಕೆ ಮಾಡುತ್ತಾರೋ, ಆರ್ಎಸ್ಎಸ್ ಅಷ್ಟೇ ಬಲಿಷ್ಠವಾಗಲಿದೆ” ಎಂದು ತಿಳಿಸಿದರು.
“ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ ಮಾತುಗಳು ಇಡೀ ಕಾಂಗ್ರೆಸ್ ಪಕ್ಷ ಹೇಳಿದಂತೆ. ನೀವು ವಿಪಕ್ಷ ನಾಯಕರಾಗಿ ಹಗುರವಾಗಿ ಮಾತನಾಡಬೇಡಿ. ನಿಮ್ಮ ನಡತೆ ಉತ್ತಮವಾಗಿರಲಿ” ಎಂದರು.
ಮಂಗಳೂರು: ಉಜಿರೆ ಎಸ್ ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ರೈ ದುಬೈನಲ್ಲಿ ಕೋವಿಡ್ ಗೆ ಬಲಿ -Vishwanews24
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…