ಬೆಂಗಳೂರು: “ಟೀಕೆ ಮಾಡುವುದೇ ವಿಪಕ್ಷ ನಾಯಕರ ಕೆಲಸ. ಆರ್ಎಸ್ಎಸ್ ಎಲ್ಲದಕ್ಕೂ ಕಾರಣ ಎಂದು ಆರೋಪಿಸುತ್ತಿರುತ್ತಾರೆ. ಹಾಗಾದರೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯಾವ ಹಿನ್ನೆಲೆಯಿಂದ ಬಂದಿದ್ದಾರೆ?” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪ್ರಶ್ನಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಲ್ಲದ್ದಕ್ಕೂ ಆರ್ಎಸ್ಎಸ್ ಕಾರಣ ಎಂದು ಆರೋಪ ಮಾಡುತ್ತಿರುತ್ತಾರೆ. ಇಂದು ಈ ಸ್ಥಾನಕ್ಕೆ ಬರಲು ಆರ್ಎಸ್ಎಸ್ ಕಾರಣ. ನಾನು ಅವರ ಐಡಿಯಾಲಜಿಗಳನ್ನು ಕಲಿತಿದ್ದೇನೆ. ನರೇಂದ್ರ ಮೋದಿ ಅವರು ಪ್ರಧಾನಿ ಆಗಲು ಕೂಡಾ ಆರ್ಎಸ್ಎಸ್ ಕಾರಣ. ಈ ವಿಚಾರವನ್ನು ಪ್ರಧಾನಿ ಮೋದಿ ಅವರೇ ಹೇಳಿಕೊಂಡಿದ್ದಾರೆ. ಹಾಗಿದ್ದಲ್ಲಿ ಸಿದ್ದರಾಮಯ್ಯ ಅವರ ಹಿನ್ನೆಲೆ ಏನು?” ಎಂದು ಕೇಳಿದರು.
ಸಿಡಿ ಪ್ರಕರಣ : ಪೊಲೀಸ್ ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಹಳ್ಳಿ -Vishwanews24
“ಮೊದಲು ಪಕ್ಷದಲ್ಲಿರುವ ಆಂತರಿಕ ಗೊಂದಲಗಳು ನಿವಾರಣೆಯಾಗಬೇಕು. ಎಷ್ಟು ಬಾರಿ ಇವರು ಆರ್ಎಸ್ಎಸ್ನ ಬಗ್ಗೆ ಟೀಕೆ ಮಾಡುತ್ತಾರೋ, ಆರ್ಎಸ್ಎಸ್ ಅಷ್ಟೇ ಬಲಿಷ್ಠವಾಗಲಿದೆ” ಎಂದು ತಿಳಿಸಿದರು.
“ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ ಮಾತುಗಳು ಇಡೀ ಕಾಂಗ್ರೆಸ್ ಪಕ್ಷ ಹೇಳಿದಂತೆ. ನೀವು ವಿಪಕ್ಷ ನಾಯಕರಾಗಿ ಹಗುರವಾಗಿ ಮಾತನಾಡಬೇಡಿ. ನಿಮ್ಮ ನಡತೆ ಉತ್ತಮವಾಗಿರಲಿ” ಎಂದರು.
ಮಂಗಳೂರು: ಉಜಿರೆ ಎಸ್ ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ರೈ ದುಬೈನಲ್ಲಿ ಕೋವಿಡ್ ಗೆ ಬಲಿ -Vishwanews24
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…