ಬೆಂಗಳೂರು: ವಿಧಾನ ಪರಿಷತ್ನ ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ ಹಿನ್ನೆಲೆ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಕಾಂಗ್ರೆಸ್ಗೆ ಗುಡ್ಬೈ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ನಿರ್ಧಾರ ನೋಡಿ ನನಗೆ ಸಂತೋಷ ಆಯಿತು. ಇದರಿಂದ ಶಿವಕುಮಾರ್ ಹಾಗೂ ಹರಿಪ್ರಸಾದ್ ಅವರಿಗೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಅವರಿಬ್ಬರ ವಿಚಾರಧಾರೆ ಒಂದೇ ಆಗಿರುವುದರಿಂದ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದು ವ್ಯಂಗ್ಯವಾಡಿದರು.
ಆದಷ್ಟು ಶೀಘ್ರವೇ ಎಂಎಲ್ಸಿಗೆ ರಾಜೀನಾಮೆ ಕೊಡುತ್ತೇನೆ. ಈ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ :
ಶಿವಕುಮಾರ್ಗೂ ನಮಗೂ ಯಾವತ್ತು ಹೊಂದಾಣಿಕೆ ಆಗಲ್ಲ. ಅವರ ವಿಚಾರಧಾರೆಗಳು ನಮಗೆ ಆಗಲ್ಲ. ನಮಗೆ ಸಿದ್ದರಾಮಯ್ಯ ಜೊತೆ ಹೊಂದಾಣಿಕೆ ಇತ್ತು. ಆದರೆ ಕಾಂಗ್ರೆಸ್ಗೂ ನನಗೂ ಮುಗಿದ ಅಧ್ಯಾಯವಾಗಿದೆ. ಸಿದ್ದರಾಮಯ್ಯ ಅವರಿಂದ ನಾನು ಕಾಂಗ್ರೆಸ್ಗೆ ಹೋಗಿದ್ದೆ. ಸೋನಿಯಾ ಗಾಂಧಿ ಅವರು ನನ್ನ ಭಾರ ಇಳಿಸಿದ್ದಾರೆ. ನನ್ನ ಹಿತೈಷಿಗಳ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.
ಸಿದ್ದರಾಮಯ್ಯಗಾಗಿ ಜೈಲಿಗೆ ಹೋಗಿ ಕಟ್ಟಿದ ಪಕ್ಷ ದಳ ಹಾಗೂ ದೇವೇಗೌಡರನ್ನು ಬಿಟ್ಟೆ. ನನ್ನ ನಿರ್ಣಯವನ್ನು ಶೀಘ್ರವಾಗಿ ನಿರ್ಧರಿಸುತ್ತೇನೆ. ಈ ಬಗ್ಗೆ ಕಾಂಗ್ರೆಸ್ಗೆ ಉತ್ತರ ಕೊಡಬೇಕು. ಸಿದ್ದರಾಮಯ್ಯ ಅವರನ್ನು ಬಾದಾಮಿಗೆ ಕರೆದೊಯ್ದಿದ್ದೆ. ಅವರಿಗೆ ರಾಜಕೀಯ ಜೀವನ ಕೊಡಲು ಅವರ ಕಾಲಿಗೆ ಬೀಳುತ್ತೇನೆ ಎಂದರು.
ಇದನ್ನೂ ಓದಿ :
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…