ಬೆಂಗಳೂರು: ಮೊದಲು ಕಾಂಗ್ರೆಸ್ ಪಕ್ಷದವರು ತಮ್ಮ ತಮ್ಮ ಮನೆಯನ್ನು ಸ್ವಚ್ಛಗೊಳಿಸಲಿ, ಮತ್ತೆ ಬೇರೆ ಪಕ್ಷದ ಬಗ್ಗೆ ಮಾತನಾಡಲಿ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬಿಜೆಪಿ ಬಗ್ಗೆ ಮಾತನಾಡುವ ಮೊದಲು ತಮ್ಮ ಪಕ್ಷದ ಬಗ್ಗೆ ತಿಳಿದುಕೊಳ್ಳಲಿ. ಮೊದಲು ಕಾಂಗ್ರೆಸ್ ಪಕ್ಷದವರು ತಮ್ಮ ಮನೆಯನ್ನು ತೊಳೆದುಕೊಳ್ಳಲಿ. ಆನಂತರ ಸಿದ್ದರಾಮಯ್ಯ ಬಿಜೆಪಿ ಬಗ್ಗೆ ಮಾತನಾಡಲಿ ಎಂದು ಸವಾಲು ಹಾಕಿದರು.
ಸರಕಾರ ರಚನೆಯಾಗಿ ಎರಡು ತಿಂಗಳಾಗಿದೆ. ನಾವು ಕಾಂಗ್ರೆಸ್’ನವರಿಗೆ ನಿಮ್ಮ ಶಾಸಕಾಂಗ ಪಕ್ಷದ ನಾಯಕನ ಹೆಸರು ಕೊಡಿ ಅಂತಾ ಕೇಳಿದ್ದೇವೆ. ಅವರಿಗೆ ಇನ್ನೂ ಹೆಸರು ಕೊಡಲು ಆಗಿಲ್ಲ. ಸಿದ್ದರಾಮಯ್ಯ ಅವರನ್ನು ನಾಯಕ ಎಂದು ಕಾಂಗ್ರೆಸ್ ಪಕ್ಷದಲ್ಲಿಯೇ ಅನೇಕರು ಒಪ್ಪುವುದಿಲ್ಲ ಎಂದು ಟೀಕಿಸಿದರು.
ಬೇರೆ ಪಕ್ಷದ ಬಗ್ಗೆ ಮಾತನಾಡುವ ಮೊದಲು ಡಿಕೆಶಿ, ಎಚ್.ಕೆ.ಪಾಟೀಲ್, ಪರಮೇಶ್ವರ ಬಾಯಿಂದ ನಮ್ಮ ನಾಯಕ ಸಿದ್ದರಾಮಯ್ಯ ಅಂತಾ ಹೇಳಿಸಲಿ ನೋಡೊಣ. ಸಿದ್ದರಾಮಯ್ಯ ಮೊದಲು ತಮ್ಮ ಮನೆ ಸರಿಮಾಡಿಕೊಳ್ಳೋದು ಕಲಿಯಲಿ ಅಂತ ಸವಾಲು ಹಾಕಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…