ಬೆಂಗಳೂರು: ಮೊದಲು ಕಾಂಗ್ರೆಸ್ ಪಕ್ಷದವರು ತಮ್ಮ ತಮ್ಮ ಮನೆಯನ್ನು ಸ್ವಚ್ಛಗೊಳಿಸಲಿ, ಮತ್ತೆ ಬೇರೆ ಪಕ್ಷದ ಬಗ್ಗೆ ಮಾತನಾಡಲಿ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬಿಜೆಪಿ ಬಗ್ಗೆ ಮಾತನಾಡುವ ಮೊದಲು ತಮ್ಮ ಪಕ್ಷದ ಬಗ್ಗೆ ತಿಳಿದುಕೊಳ್ಳಲಿ. ಮೊದಲು ಕಾಂಗ್ರೆಸ್ ಪಕ್ಷದವರು ತಮ್ಮ ಮನೆಯನ್ನು ತೊಳೆದುಕೊಳ್ಳಲಿ. ಆನಂತರ ಸಿದ್ದರಾಮಯ್ಯ ಬಿಜೆಪಿ ಬಗ್ಗೆ ಮಾತನಾಡಲಿ ಎಂದು ಸವಾಲು ಹಾಕಿದರು.
ಸರಕಾರ ರಚನೆಯಾಗಿ ಎರಡು ತಿಂಗಳಾಗಿದೆ. ನಾವು ಕಾಂಗ್ರೆಸ್’ನವರಿಗೆ ನಿಮ್ಮ ಶಾಸಕಾಂಗ ಪಕ್ಷದ ನಾಯಕನ ಹೆಸರು ಕೊಡಿ ಅಂತಾ ಕೇಳಿದ್ದೇವೆ. ಅವರಿಗೆ ಇನ್ನೂ ಹೆಸರು ಕೊಡಲು ಆಗಿಲ್ಲ. ಸಿದ್ದರಾಮಯ್ಯ ಅವರನ್ನು ನಾಯಕ ಎಂದು ಕಾಂಗ್ರೆಸ್ ಪಕ್ಷದಲ್ಲಿಯೇ ಅನೇಕರು ಒಪ್ಪುವುದಿಲ್ಲ ಎಂದು ಟೀಕಿಸಿದರು.
ಬೇರೆ ಪಕ್ಷದ ಬಗ್ಗೆ ಮಾತನಾಡುವ ಮೊದಲು ಡಿಕೆಶಿ, ಎಚ್.ಕೆ.ಪಾಟೀಲ್, ಪರಮೇಶ್ವರ ಬಾಯಿಂದ ನಮ್ಮ ನಾಯಕ ಸಿದ್ದರಾಮಯ್ಯ ಅಂತಾ ಹೇಳಿಸಲಿ ನೋಡೊಣ. ಸಿದ್ದರಾಮಯ್ಯ ಮೊದಲು ತಮ್ಮ ಮನೆ ಸರಿಮಾಡಿಕೊಳ್ಳೋದು ಕಲಿಯಲಿ ಅಂತ ಸವಾಲು ಹಾಕಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…