ರಿಷಬ್ ಶೆಟ್ಟ ನಟಿಸಿ ನಿರ್ದೇಶನ ಮಾಡಿದ್ದ ‘ಕಾಂತಾರ’ ಚಿತ್ರವು ವಿಶ್ವದಲ್ಲೆಡೆ ಭರ್ಜರಿ ಸದ್ದು ಮಾಡಿದ್ದು ಗೊತ್ತೇ ಇದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರದ ಹೆಸರು ಆಸ್ಕರ್ ಅವಾರ್ಡ್ ವರೆಗೂ ಹೋಗಿದೆ. ಚಿತ್ರದ ಅದ್ಭುತ ಯಶಸ್ಸಿನ ಬಳಿಕ ಇದೀಗ ಚಿತ್ರ ತಂಡವು ದೈವಕ್ಕೆ ಕೋಲ ಕೊಟ್ಟು ಹರಕೆ ತೀರಿಸಿದೆ.
ಇತ್ತೀಚೆಗೆ ಮಂಗಳೂರು ಭಾಗದಲ್ಲಿ ದೈವಕ್ಕೆ ಕೋಲ ಕೊಟ್ಟು ಹರಕೆ ತೀರಿಸಿತ್ತು, ನಟ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು, ಕಾರ್ತಿಕ್ ಗೌಡ, ನಟಿ ಸಪ್ತಮಿ ಗೌಡ ಸೇರಿದಂತೆ ಚಿತ್ರತಂಡವು ಭಾಗವಹಿಸಿತ್ತು.
ಇದರ ವಿಡಿಯೋವನ್ನು ಇದೀಗ ಹೊಂಬಾಳೆ ಫಿಲಂಸ್ ಯುಟ್ಯೂಬ್ ಚಾನೆಲ್ ನಲ್ಲಿ ಅಪ್ಲೋಡ್ ಮಾಡಿದೆ. ವರಾಹ ರೂಪಂ ಹಾಡು ಬಳಸಿ ಕೋಲದ ವಿಡಿಯೋ ಎಡಿಟ್ ಮಾಡಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹೊಂಬಾಳೆ ಫಿಲಂಸ್, “ನೀವು ಪ್ರಕೃತಿಗೆ ಶರಣಾಗಿ ಮತ್ತು ಜೀವನದಲ್ಲಿ ಯಶಸ್ಸು ಮತ್ತು ಸ್ವಾತಂತ್ರ್ಯವನ್ನು ನಿಮಗೆ ನೀಡಿದ ದೇವರನ್ನು ಆರಾಧಿಸಿ. ‘ಕಾಂತಾರ’ ತಂಡವು ದೈವವನ್ನು ನೈಜ ರೂಪದಲ್ಲಿ ವೀಕ್ಷಿಸಿತು, ದೈವದ ಆಶೀರ್ವಾದವನ್ನು ಪಡೆಯಿತು” ಎಂದು ಬರೆದುಕೊಂಡಿದೆ.
ದೈವ, ದೈವ ನರ್ತಕ ಮತ್ತು ಜಮೀನ್ದಾರರು, ಮಾನವ ಮತ್ತು ಪ್ರಕೃತಿ ನಡುವಿನ ಸಂಬಂಧದ ಬಗೆಗಿನ ಕಥಾಹಂದರದಲ್ಲಿ ಕಾಂತಾರ ಚಿತ್ರವನ್ನು ಮಾಡಲಾಗಿತ್ತು.
ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…