Featured

ಕಾಂತಾರ ಅಬ್ಬರದ ನಂತರ ಕರಾವಳಿಯಾದ್ಯಂತ ತುಳು ರಂಗಭೂಮಿಯಲ್ಲಿ ಹೊಸ ಕ್ರಾಂತಿ ಬರೆದ  ಶಿವದೂತೆ ಗುಳಿಗೆ ತುಳು ನಾಟಕ  ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಪ್ರದರ್ಶನಕ್ಕೆ ತಯಾರಿ – Vishwanews24

ಕಾಂತಾರ ಅಬ್ಬರದ ನಂತರ ಕರಾವಳಿಯಾದ್ಯಂತ ತುಳು ರಂಗಭೂಮಿಯಲ್ಲಿ ಹೊಸ ಕ್ರಾಂತಿ ಬರೆದ  ಶಿವದೂತೆ ಗುಳಿಗೆ ತುಳು ನಾಟಕ  ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಪ್ರದರ್ಶನಕ್ಕೆ ತಯಾರಿ

ಹಿಂದಿಯಲ್ಲಿ ಉತ್ತಮ ಫಲಿತಾಂಶ ದೊರೆತರೆ ಮಲಯಾಳ, ಗುಜರಾತಿ ಹಾಗೂ ಮರಾಠಿ ಭಾಷೆಯಲ್ಲಿಯೂ ಗುಳಿಗನ ನಾಟಕ ಪ್ರದರ್ಶನ

ಮಂಗಳೂರು: ತುಳುನಾಡಿನ ದೈವಗಳಾದ ಪಂಜುರ್ಲಿ, ಗುಳಿಗನ ಕಥೆಯಾಧಾರಿತ “ಕಾಂತಾರ’ ಸಿನೆಮಾ ದೇಶ-ವಿದೇಶದಲ್ಲಿ ಮೋಡಿ ಮಾಡುತ್ತಿರುವ ಮಧ್ಯೆಯೇ, ಕರಾವಳಿಯಾದ್ಯಂತ ತುಳು ರಂಗಭೂಮಿಯಲ್ಲಿ ಹೊಸ ಕ್ರಾಂತಿ ಬರೆದ “ಶಿವದೂತೆ ಗುಳಿಗೆ’ ತುಳು ನಾಟಕ ಇದೀಗ ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಪ್ರದರ್ಶನಕ್ಕೆ ಅಣಿಯಾಗಿದೆ..

“ಕಾಂತಾರ’ ಸಿನೆಮಾದಲ್ಲಿ 20 ನಿಮಿಷ ತುಳುನಾಡಿನ ಕಾರಣಿಕ ಶಕ್ತಿ ಗುಳಿಗನ ಪ್ರದರ್ಶನವಿದ್ದರೆ, ಶಿವದೂತೆ ಗುಳಿಗೆ ನಾಟಕವು ಪೂರ್ಣ ಗುಳಿಗನ ಕಥೆಯಾಧಾರಿತವಾಗಿದೆ. ವಿಶೇಷವೆಂದರೆ, ಕಾಂತಾರದಲ್ಲಿ “ಗುರುವ’ನಾಗಿ ಮಿಂಚಿರುವ ಕಿರುತೆರೆ ನಟ ಸ್ವರಾಜ್‌ ಶೆಟ್ಟಿ ಅವರೇ ಶಿವದೂತೆ ಗುಳಿಗ ನಾಟಕದಲ್ಲಿ “ಗುಳಿಗ’ನಾಗಿ ಅಭಿನಯಿಸುತ್ತಿದ್ದಾರೆ.

ಕಾಂತಾರ ಸಿನೆಮಾದಲ್ಲಿ ಗುಳಿಗನ ಅಬ್ಬರ ಕಂಡು ಕುತೂಹಲದಿಂದ ದೇಶ ಹಾಗೂ ರಾಜ್ಯದ ವಿವಿಧ ಭಾಗಗಳ ಜನರು ಗುಳಿಗ ದೈವದ ವಿಶೇಷತೆಯ ಬಗ್ಗೆ ತಿಳಿದುಕೊಳ್ಳುತ್ತಿದ್ದಾರೆ. ಕರಾವಳಿಯಲ್ಲಿ ಗುಳಿಗನ ಮಹಿಮೆಯನ್ನು ಸಾರುವ ನಾಟಕ ಪ್ರದರ್ಶನವಾಗುತ್ತಿರುವ ಹಿನ್ನೆಲೆಯಲ್ಲಿ, ಅದನ್ನು ಬೆಂಗಳೂರು, ಹುಬ್ಬಳ್ಳಿ, ಧಾರವಾಡ ಸಹಿತ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರದರ್ಶನ ಮಾಡಲು ಆಹ್ವಾನ ಬಂದಿದೆ. ಇದರಂತೆ ತುಳುವಿನಲ್ಲಿರುವ ಶಿವದೂತೆ ಗುಳಿಗೆ ಕನ್ನಡದಲ್ಲಿಯೂ ಪ್ರದರ್ಶನಕ್ಕೆ ರೆಡಿಯಾಗುತ್ತಿದೆ. ಡಬ್ಬಿಂಗ್‌ ಕಾರ್ಯ ಸದ್ಯ ಪ್ರಗತಿಯಲ್ಲಿದೆ.

ಬಂಟ್ವಾಳ: ಕೆಲಸವೊಂದರ ಇಂಟರ್‌ವ್ಯೂ ಇದೆ ಎಂದು ಹೇಳಿ ಮನೆಯಿಂದ ಹೋದ ಯುವತಿ ನಾಪತ್ತೆ – Vishwanews24

ಗುಳಿಗನ ಚರಿತ್ರೆಯ ಪಾಡªನ ತುಳು ಭಾಷೆಯಲ್ಲಿರಲಿದೆ. ಉಳಿದಂತೆ ಹಾಡು ಸಹಿತ ಎಲ್ಲ ಸಂಭಾಷಣೆ ಕನ್ನಡದಲ್ಲಿರಲಿದೆ.

ಹಿಂದಿಯಲ್ಲಿಯೂ ಕಾಂತಾರ ಬಗ್ಗೆ ಕುತೂಹಲ ವ್ಯಕ್ತವಾದ ಹಿನ್ನೆಲೆಯಲ್ಲಿ ಗುಳಿಗ ನಾಟಕವನ್ನು ಹಿಂದಿಯಲ್ಲೂ ಪ್ರದರ್ಶಿಸುವಂತೆ ಬೇಡಿಕೆ ಬಂದಿದೆ.

ಹೀಗಾಗಿ ಹಿಂದಿ ಅವತರಣಿಕೆಯಲ್ಲಿಯೂ ಗುಳಿಗನ ಕಥೆ ನಾಟಕದ ಸ್ವರೂಪದಲ್ಲಿ ಪ್ರದರ್ಶನಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಹಿಂದಿಯಲ್ಲಿ ಉತ್ತಮ ಫಲಿತಾಂಶ ದೊರೆತರೆ ಮಲಯಾಳ, ಗುಜರಾತಿ ಹಾಗೂ ಮರಾಠಿ ಭಾಷೆಯಲ್ಲಿಯೂ ಗುಳಿಗನ ನಾಟಕ ಪ್ರದರ್ಶನಕ್ಕೆ ನಿರ್ದೇಶಕ ವಿಜಯ್‌ ಕುಮಾರ್‌ ಕೊಡಿಯಾಲ್‌ಬೈಲು ಅವರು ಚಿಂತನೆ ನಡೆಸಿದ್ದಾರೆ.

ಬಿಹಾರ :ಸಾಲಗಾರರ ಕಿರಿ ಕಿರಿ.. ಕುಟುಂಬದ 6 ಮಂದಿ ವಿಷ ಸೇವಿಸಿ ಆತ್ಮಹತ್ಯೆ, ಓರ್ವಳ *ಸ್ಥಿತಿ ಗಂಭೀರ – Vishwanews24

2020ರ ಜ. 2ರಂದು ಮೊದಲ ಪ್ರದರ್ಶನ ಕಂಡ ತುಳುವಿನ “ಶಿವದೂತೆ ಗುಳಿಗೆ’ ಇದೀಗ 300ನೇ ಪ್ರದರ್ಶನವನ್ನು ದಾಟಿ ಮುನ್ನಡೆಯುತ್ತಿದೆ. ರಿಷಬ್‌ ಶೆಟ್ಟಿ ಅವರು ಕಾಂತಾರ ಸಿನೆಮಾ ಮಾಡುವ ಮುನ್ನ ಶಿವದೂತೆ ಗುಳಿಗ ನಾಟಕದ ಬಗ್ಗೆ ವಿವರವಾಗಿ ಅಭ್ಯಸಿಸಿ ಕೊಡಿಯಾಲ್‌ಬೈಲ್‌ ಅವರ ಜತೆಗೆ ಮಾತುಕತೆ ನಡೆಸಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago