Featured

ಕಾಂತಾರ ಕ್ಲೈಮ್ಯಾಕ್ಸ್​ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. : ರಿಷಬ್​ ಶೆಟ್ಟಿ ಚಿತ್ರಕ್ಕೆ ಹೃತಿಕ್​ ರೋಷನ್​ ಮೆಚ್ಚುಗೆ – VIshwanews24

ಕಾಂತಾರ ಸಿನಿಮಾ ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ, ಕ್ಲೈಮ್ಯಾಕ್ಸ್​ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. : ರಿಷಬ್​ ಶೆಟ್ಟಿ ಚಿತ್ರಕ್ಕೆ ಹೃತಿಕ್​ ರೋಷನ್​ ಮೆಚ್ಚುಗೆ

ದೇಶಾದ್ಯಂತ ಹೊಸ ಸಂಚಲನ ಮೂಡಿಸಿದ ‘ಕಾಂತಾರ’ ಚಿತ್ರದ ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.  ಬಾಲಿವುಡ್​ನ ಖ್ಯಾತ ನಟ ಹೃತಿಕ್ ರೋಷನ್ ಅವರು ಕೂಡ ‘ಕಾಂತಾರ’ ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಚಿತ್ರದ ಕ್ಲೈಮ್ಯಾಕ್ಸ್​ ಸಖತ್​ ಇಷ್ಟ ಆಗಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ಕಾಂತಾರ ಸಿನಿಮಾವನ್ನು ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ. ರಿಷಬ್​ ಶೆಟ್ಟಿ ಅವರಿಂದಾಗಿ ಈ ಸಿನಿಮಾ ಅಸಾಧಾರಣ ಎನಿಸಿಕೊಂಡಿದೆ. ನಿರೂಪಣೆ, ನಟನೆ ಮತ್ತು ನಿರ್ದೇಶನ ಅತ್ಯುತ್ತಮವಾಗಿದೆ. ಕ್ಲೈಮ್ಯಾಕ್ಸ್​ನಲ್ಲಿ ಕಂಡ ಬದಲಾವನೆಯಿಂದ ನನಗೆ ರೋಮಾಂಚನ ಆಯಿತು. ಇಡೀ ತಂಡಕ್ಕೆ ನನ್ನ ಗೌರವ ಮತ್ತು ಅಭಿನಂದನೆಗಳು’ ಎಂದು ಹೃತಿಕ್​ ರೋಷನ್​ ಪೋಸ್ಟ್​ ಮಾಡಿದ್ದಾರೆ.

ಕನ್ನಡ ಸಿನಿಮಾಗಳು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ‘ಕಾಂತಾರ’ ಚಿತ್ರದಿಂದ ಚಂದನವನದ ಚಾರ್ಮ್​ ಹೆಚ್ಚಿದೆ. ರಜನಿಕಾಂತ್​, ವಿವೇಕ್​ ಅಗ್ನಿಹೋತ್ರಿ, ಕಂಗನಾ ರಣಾವತ್​, ಅನುಷ್ಕಾ ಶೆಟ್ಟಿ, ಪ್ರಭಾಸ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಸಿನಿಮಾವನ್ನು ಕೊಂಡಾಡಿದ್ದಾರೆ. ಅವರ ಸಾಲಿಗೆ ಹೃತಿಕ್ ರೋಷನ್​ ಕೂಡ ಸೇರ್ಪಡೆ ಆಗಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago