Featured

ಕಾಂತಾರ ಕ್ಲೈಮ್ಯಾಕ್ಸ್​ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. : ರಿಷಬ್​ ಶೆಟ್ಟಿ ಚಿತ್ರಕ್ಕೆ ಹೃತಿಕ್​ ರೋಷನ್​ ಮೆಚ್ಚುಗೆ – VIshwanews24

ಕಾಂತಾರ ಸಿನಿಮಾ ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ, ಕ್ಲೈಮ್ಯಾಕ್ಸ್​ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. : ರಿಷಬ್​ ಶೆಟ್ಟಿ ಚಿತ್ರಕ್ಕೆ ಹೃತಿಕ್​ ರೋಷನ್​ ಮೆಚ್ಚುಗೆ

ದೇಶಾದ್ಯಂತ ಹೊಸ ಸಂಚಲನ ಮೂಡಿಸಿದ ‘ಕಾಂತಾರ’ ಚಿತ್ರದ ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.  ಬಾಲಿವುಡ್​ನ ಖ್ಯಾತ ನಟ ಹೃತಿಕ್ ರೋಷನ್ ಅವರು ಕೂಡ ‘ಕಾಂತಾರ’ ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಚಿತ್ರದ ಕ್ಲೈಮ್ಯಾಕ್ಸ್​ ಸಖತ್​ ಇಷ್ಟ ಆಗಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ಕಾಂತಾರ ಸಿನಿಮಾವನ್ನು ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ. ರಿಷಬ್​ ಶೆಟ್ಟಿ ಅವರಿಂದಾಗಿ ಈ ಸಿನಿಮಾ ಅಸಾಧಾರಣ ಎನಿಸಿಕೊಂಡಿದೆ. ನಿರೂಪಣೆ, ನಟನೆ ಮತ್ತು ನಿರ್ದೇಶನ ಅತ್ಯುತ್ತಮವಾಗಿದೆ. ಕ್ಲೈಮ್ಯಾಕ್ಸ್​ನಲ್ಲಿ ಕಂಡ ಬದಲಾವನೆಯಿಂದ ನನಗೆ ರೋಮಾಂಚನ ಆಯಿತು. ಇಡೀ ತಂಡಕ್ಕೆ ನನ್ನ ಗೌರವ ಮತ್ತು ಅಭಿನಂದನೆಗಳು’ ಎಂದು ಹೃತಿಕ್​ ರೋಷನ್​ ಪೋಸ್ಟ್​ ಮಾಡಿದ್ದಾರೆ.

ಕನ್ನಡ ಸಿನಿಮಾಗಳು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ‘ಕಾಂತಾರ’ ಚಿತ್ರದಿಂದ ಚಂದನವನದ ಚಾರ್ಮ್​ ಹೆಚ್ಚಿದೆ. ರಜನಿಕಾಂತ್​, ವಿವೇಕ್​ ಅಗ್ನಿಹೋತ್ರಿ, ಕಂಗನಾ ರಣಾವತ್​, ಅನುಷ್ಕಾ ಶೆಟ್ಟಿ, ಪ್ರಭಾಸ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಸಿನಿಮಾವನ್ನು ಕೊಂಡಾಡಿದ್ದಾರೆ. ಅವರ ಸಾಲಿಗೆ ಹೃತಿಕ್ ರೋಷನ್​ ಕೂಡ ಸೇರ್ಪಡೆ ಆಗಿದ್ದಾರೆ.

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

51 minutes ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

2 hours ago