Featured

ಕಾಂತಾರ ಕ್ಲೈಮ್ಯಾಕ್ಸ್​ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. : ರಿಷಬ್​ ಶೆಟ್ಟಿ ಚಿತ್ರಕ್ಕೆ ಹೃತಿಕ್​ ರೋಷನ್​ ಮೆಚ್ಚುಗೆ – VIshwanews24

ಕಾಂತಾರ ಸಿನಿಮಾ ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ, ಕ್ಲೈಮ್ಯಾಕ್ಸ್​ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. : ರಿಷಬ್​ ಶೆಟ್ಟಿ ಚಿತ್ರಕ್ಕೆ ಹೃತಿಕ್​ ರೋಷನ್​ ಮೆಚ್ಚುಗೆ

ದೇಶಾದ್ಯಂತ ಹೊಸ ಸಂಚಲನ ಮೂಡಿಸಿದ ‘ಕಾಂತಾರ’ ಚಿತ್ರದ ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.  ಬಾಲಿವುಡ್​ನ ಖ್ಯಾತ ನಟ ಹೃತಿಕ್ ರೋಷನ್ ಅವರು ಕೂಡ ‘ಕಾಂತಾರ’ ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಚಿತ್ರದ ಕ್ಲೈಮ್ಯಾಕ್ಸ್​ ಸಖತ್​ ಇಷ್ಟ ಆಗಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ಕಾಂತಾರ ಸಿನಿಮಾವನ್ನು ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ. ರಿಷಬ್​ ಶೆಟ್ಟಿ ಅವರಿಂದಾಗಿ ಈ ಸಿನಿಮಾ ಅಸಾಧಾರಣ ಎನಿಸಿಕೊಂಡಿದೆ. ನಿರೂಪಣೆ, ನಟನೆ ಮತ್ತು ನಿರ್ದೇಶನ ಅತ್ಯುತ್ತಮವಾಗಿದೆ. ಕ್ಲೈಮ್ಯಾಕ್ಸ್​ನಲ್ಲಿ ಕಂಡ ಬದಲಾವನೆಯಿಂದ ನನಗೆ ರೋಮಾಂಚನ ಆಯಿತು. ಇಡೀ ತಂಡಕ್ಕೆ ನನ್ನ ಗೌರವ ಮತ್ತು ಅಭಿನಂದನೆಗಳು’ ಎಂದು ಹೃತಿಕ್​ ರೋಷನ್​ ಪೋಸ್ಟ್​ ಮಾಡಿದ್ದಾರೆ.

ಕನ್ನಡ ಸಿನಿಮಾಗಳು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ‘ಕಾಂತಾರ’ ಚಿತ್ರದಿಂದ ಚಂದನವನದ ಚಾರ್ಮ್​ ಹೆಚ್ಚಿದೆ. ರಜನಿಕಾಂತ್​, ವಿವೇಕ್​ ಅಗ್ನಿಹೋತ್ರಿ, ಕಂಗನಾ ರಣಾವತ್​, ಅನುಷ್ಕಾ ಶೆಟ್ಟಿ, ಪ್ರಭಾಸ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಸಿನಿಮಾವನ್ನು ಕೊಂಡಾಡಿದ್ದಾರೆ. ಅವರ ಸಾಲಿಗೆ ಹೃತಿಕ್ ರೋಷನ್​ ಕೂಡ ಸೇರ್ಪಡೆ ಆಗಿದ್ದಾರೆ.

Vishwa News 24

Recent Posts

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

16 minutes ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

24 minutes ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

31 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

51 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

3 hours ago