ಹಲವು ವಿಘ್ನಗಳನ್ನ ಎದುರಿಸಿ, ಅಡೆತಡೆಗಳನ್ನ ಮೆಟ್ಟಿನಿಂತು `ಕಾಂತಾರ ಚಾಪ್ಟರ್ 1′ ಚಿತ್ರ ಚಿತ್ರೀಕರಣ ಮುಗಿಸಿದೆ. ಇದರ ಘೋಷಣೆಯನ್ನು ವಿಭಿನ್ನವಾಗಿ ಮಾಡಿರುವ ರಿಷಬ್ ಶೆಟ್ಟಿ ಕಾಂತಾರದ ಮೊದಲ ಮೇಕಿಂಗ್ ತುಣುಕನ್ನ ರಿಲೀಸ್ ಮಾಡಿದ್ದಾರೆ.
ಮೇಕಿಂಗ್ ಬ್ಯಾಗ್ರೌಂಡ್ನಲ್ಲಿ ಕಾಂತಾರ ಸೃಷ್ಟಿಯಾಗಿರುವ ಜೊತೆಗೆ ಎದುರಾದ ವಿಘ್ನಗಳ ಬಗ್ಗೆ ವಿವರಿಸಿದ್ದಾರೆ. ಎಲ್ಲವನ್ನೂ ಎದುರಿಸಿ ಸಿನಿಮಾ ಆಗಬೇಕಾದರೆ ಇದು ಸಾಧ್ಯವಾಗಿದ್ದು ದೈವಶಕ್ತಿಯಿಂದ ಮಾತ್ರ ಸಾಧ್ಯ ಎಂದಿದ್ದಾರೆ.
ಇದೇ ಅಕ್ಟೋಬರ್ 2ರಂದು `ಕಾಂತಾರ ಚಾಪ್ಟರ್ 1′ ವಿಶ್ವದಾದ್ಯಂತ ರಿಲೀಸ್ ಆಗುತ್ತದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಚಿತ್ರೀಕರಣ ಮುಗಿದಿದ್ದು ಶೂಟಿಂಗ್ ವೇಳೆ ಚಿತ್ರತಂಡ ವಿಘ್ನಗಳನ್ನು ಎದುರಿಸಿತ್ತು. ಅದರ ಸ್ವವಿರವನ್ನ ರಿಷಬ್ ಶೆಟ್ಟಿ ಮೇಕಿಂಗ್ನಲ್ಲಿ ಹೇಳಿಕೊಂಡಿದ್ದಾರೆ.
ಕಾಂತಾರ ಸಿನಿಮಾ ಮಾಡುವುದರ ಉದ್ದೇಶ ಏನು? ಸೆಟ್ನಲ್ಲಿ ಎಷ್ಟು ಮಂದಿ ಕಾರ್ಯನಿರ್ವಹಿಸಿದ್ದರು ಹಾಗೂ ಎಷ್ಟು ದಿನ ಚಿತ್ರೀಕರಣ ನಡೆದಿದೆ ಅನ್ನೋದನ್ನ ರಿಷಬ್ ಶೆಟ್ಟಿ ಬಿಚ್ಚಿಟ್ಟಿದ್ದಾರೆ.
ರಿಷಬ್ ಹೇಳಿದ್ದೇನು ?
ನಮ್ಮ ಮಣ್ಣಿನ ಕಥೆಯನ್ನು ಇಡೀ ಪ್ರಪಂಚಕ್ಕೆ ಹೇಳಬೇಕನ್ನೋದು ನನ್ನದೊಂದು ಕನಸು. ನಮ್ಮ ಊರು, ನಮ್ಮ ಜನ, ನಮ್ಮ ಬಂಧುಗಳು, ನಾನು ಆ ಕನಸಿನ ಬೆನ್ನು ಹತ್ತಿದಾಗ ಸಾವಿರಾರು ಜನ ನನ್ನ ಬಳಿ ಬಂದರು. 3 ವರ್ಷಗಳ ಪರಿಶ್ರಮ, 250 ದಿನಗಳ ಚಿತ್ರೀಕರಣ, ಎಷ್ಟೇ ಕಷ್ಟ ಬಂದ್ರೂ ನಾನು ನಂಬಿರುವ ದೈವ ನನ್ನ ಕೈ ಬಿಡಲಿಲ್ಲ. ನನ್ನ ಇಡೀ ತಂಡ, ನಿರ್ಮಾಪಕರು ನನ್ನ ಬೆನ್ನೆಲುಬು. ಪ್ರತಿ ದಿನ ಸೆಟ್ನಲ್ಲಿ ಸಾವಿರಾರು ಜನರನ್ನ ನೋಡ್ತಿದ್ದಾಗ ನನಗೆ ಕಾಡ್ತಿದ್ದ ವಿಷಯ ಒಂದೇ. ಇದು ಸಿನಿಮಾ ಅಲ್ಲ ಇದೊಂದು ಶಕ್ತಿ. ಕಾಂತಾರ ಶೂಟಿಂಗ್ ವೇಳೆ ಉಂಟಾದ ಹಲವು ವಿಘ್ನಗಳನ್ನ ಎದುರಿಸಿ ಚಿತ್ರೀಕರಣ ಮುಗಿಸಿರುವ ತಂಡ. ಆ ವಿಚಾರವನ್ನ ಮೇಕಿಂಗ್ ದೃಶ್ಯದ ಬ್ಯಾಗ್ರೌಂಡ್ನಲ್ಲಿ ರಿಷಬ್ ಶೆಟ್ಟಿ ವಿವರಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…