Featured

ಕಾಂತಾರ ಚಾಪ್ಟರ್‌ 1 – ಅ. 2ರಂದು ವಿಶ್ವದಾದ್ಯಂತ ರಿಲೀಸ್  -vishwanews24

ಎಲ್ಲವನ್ನೂ ಎದುರಿಸಿ ಸಿನಿಮಾ ಆಗಬೇಕಾದರೆ ಇದು ದೈವಶಕ್ತಿಯಿಂದ ಮಾತ್ರ ಸಾಧ್ಯ : ರಿಷಬ್ ಶೆಟ್ಟಿ

ಹಲವು ವಿಘ್ನಗಳನ್ನ ಎದುರಿಸಿ, ಅಡೆತಡೆಗಳನ್ನ ಮೆಟ್ಟಿನಿಂತು `ಕಾಂತಾರ ಚಾಪ್ಟರ್ 1′  ಚಿತ್ರ ಚಿತ್ರೀಕರಣ ಮುಗಿಸಿದೆ. ಇದರ ಘೋಷಣೆಯನ್ನು ವಿಭಿನ್ನವಾಗಿ ಮಾಡಿರುವ ರಿಷಬ್ ಶೆಟ್ಟಿ ಕಾಂತಾರದ ಮೊದಲ ಮೇಕಿಂಗ್ ತುಣುಕನ್ನ ರಿಲೀಸ್ ಮಾಡಿದ್ದಾರೆ.

ಮೇಕಿಂಗ್ ಬ್ಯಾಗ್ರೌಂಡ್‌ನಲ್ಲಿ ಕಾಂತಾರ ಸೃಷ್ಟಿಯಾಗಿರುವ ಜೊತೆಗೆ ಎದುರಾದ ವಿಘ್ನಗಳ ಬಗ್ಗೆ ವಿವರಿಸಿದ್ದಾರೆ. ಎಲ್ಲವನ್ನೂ ಎದುರಿಸಿ ಸಿನಿಮಾ ಆಗಬೇಕಾದರೆ ಇದು ಸಾಧ್ಯವಾಗಿದ್ದು ದೈವಶಕ್ತಿಯಿಂದ ಮಾತ್ರ ಸಾಧ್ಯ ಎಂದಿದ್ದಾರೆ.

ಇದೇ ಅಕ್ಟೋಬರ್ 2ರಂದು `ಕಾಂತಾರ ಚಾಪ್ಟರ್ 1′ ವಿಶ್ವದಾದ್ಯಂತ ರಿಲೀಸ್ ಆಗುತ್ತದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಚಿತ್ರೀಕರಣ ಮುಗಿದಿದ್ದು ಶೂಟಿಂಗ್ ವೇಳೆ ಚಿತ್ರತಂಡ ವಿಘ್ನಗಳನ್ನು ಎದುರಿಸಿತ್ತು. ಅದರ ಸ್ವವಿರವನ್ನ ರಿಷಬ್ ಶೆಟ್ಟಿ ಮೇಕಿಂಗ್‌ನಲ್ಲಿ ಹೇಳಿಕೊಂಡಿದ್ದಾರೆ.

ಕಾಂತಾರ ಸಿನಿಮಾ ಮಾಡುವುದರ ಉದ್ದೇಶ ಏನು? ಸೆಟ್‌ನಲ್ಲಿ ಎಷ್ಟು ಮಂದಿ ಕಾರ್ಯನಿರ್ವಹಿಸಿದ್ದರು ಹಾಗೂ ಎಷ್ಟು ದಿನ ಚಿತ್ರೀಕರಣ ನಡೆದಿದೆ ಅನ್ನೋದನ್ನ ರಿಷಬ್ ಶೆಟ್ಟಿ ಬಿಚ್ಚಿಟ್ಟಿದ್ದಾರೆ.

ರಿಷಬ್ ಹೇಳಿದ್ದೇನು ?
ನಮ್ಮ ಮಣ್ಣಿನ ಕಥೆಯನ್ನು ಇಡೀ ಪ್ರಪಂಚಕ್ಕೆ ಹೇಳಬೇಕನ್ನೋದು ನನ್ನದೊಂದು ಕನಸು. ನಮ್ಮ ಊರು, ನಮ್ಮ ಜನ, ನಮ್ಮ ಬಂಧುಗಳು, ನಾನು ಆ ಕನಸಿನ ಬೆನ್ನು ಹತ್ತಿದಾಗ ಸಾವಿರಾರು ಜನ ನನ್ನ ಬಳಿ ಬಂದರು. 3 ವರ್ಷಗಳ ಪರಿಶ್ರಮ, 250 ದಿನಗಳ ಚಿತ್ರೀಕರಣ, ಎಷ್ಟೇ ಕಷ್ಟ ಬಂದ್ರೂ ನಾನು ನಂಬಿರುವ ದೈವ ನನ್ನ ಕೈ ಬಿಡಲಿಲ್ಲ. ನನ್ನ ಇಡೀ ತಂಡ, ನಿರ್ಮಾಪಕರು ನನ್ನ ಬೆನ್ನೆಲುಬು. ಪ್ರತಿ ದಿನ ಸೆಟ್‌ನಲ್ಲಿ ಸಾವಿರಾರು ಜನರನ್ನ ನೋಡ್ತಿದ್ದಾಗ ನನಗೆ ಕಾಡ್ತಿದ್ದ ವಿಷಯ ಒಂದೇ. ಇದು ಸಿನಿಮಾ ಅಲ್ಲ ಇದೊಂದು ಶಕ್ತಿ. ಕಾಂತಾರ ಶೂಟಿಂಗ್ ವೇಳೆ ಉಂಟಾದ ಹಲವು ವಿಘ್ನಗಳನ್ನ ಎದುರಿಸಿ ಚಿತ್ರೀಕರಣ ಮುಗಿಸಿರುವ ತಂಡ. ಆ ವಿಚಾರವನ್ನ ಮೇಕಿಂಗ್ ದೃಶ್ಯದ ಬ್ಯಾಗ್ರೌಂಡ್‌ನಲ್ಲಿ ರಿಷಬ್ ಶೆಟ್ಟಿ ವಿವರಿಸಿದ್ದಾರೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

15 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

16 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

16 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

17 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

18 hours ago