Featured

ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯದ ನುಡಿ ನೀಡಿಲ್ಲ: ಆಡಳಿತ ಮಂಡಳಿ ಸ್ಪಷ್ಟನೆ – vishwanews24

ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯದ ನುಡಿ ನೀಡಿಲ್ಲ’:   ಆಡಳಿತ ಮಂಡಳಿ ಸ್ಪಷ್ಟನೆ

‘ಕಾಂತಾರ ಚಾಪ್ಟರ್ 1’ ಚಿತ್ರ ನೋಡಿ ಅನೇಕರು ದೈವವನ್ನು ಅನುಕರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ದೈವಕ್ಕೆ ಅಪಚಾರ ಆಗುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದವು. ಇತ್ತೀಚೆಗೆ ದೈವ ಹೇಳಿದ ಮಾತು ಕೂಡ ಚರ್ಚೆಗೆ ಕಾರಣ ಆಗಿತ್ತು. ‘ದೈವ ನುಡಿದಿದ್ದು ಕಾಂತಾರ ಚಿತ್ರದ ಬಗ್ಗೆಯೇ’ ಎಂದು ಅನೇಕರು ಹೇಳಿದ್ದರು. ಈ ಎಲ್ಲಾ ವಿಚಾರಗಳಿಗೆ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ‘ದೈವ ಕಾಂತಾರ ಸಿನಿಮಾ ಬಗ್ಗೆ ಏನನ್ನೂ ಹೇಳಿಲ್ಲ’ ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

‘ಕಾಂತಾರ ಚಾಪ್ಟರ್ 1’ ಸಿನಿಮಾ ರಿಲೀಸ್ ಆದ ಬಳಿಕ ಅನೇಕರು ದೈವದ ಅನುಕರಣೆ ಮಾಡುತ್ತಿದ್ದಾರೆ. ಥಿಯೇಟರ್ ಮುಂದೆ ಬಂದು ದೈವ ಬಂದಂತೆಲ್ಲ ನಡೆದುಕೊಂಡಿದ್ದಾರೆ. ದೈವದ ಅನುಕರಣೆ ಅನೇಕರಿಗೆ ಅಪಹಾಸ್ಯ ಮಾಡುತ್ತಿರುವ ರೀತಿ ಕಾಣಿಸಿದ್ದು, ದೈವಾರಾಧಕರು ವಿರೋಧ ಹೊರಹಾಕಿದ್ದರು. ಹೀಗಾಗಿ, ಕೆಲವರು ದೈವದ ಬಳಿ ಈ ಬಗ್ಗೆ ಪ್ರಶ್ನೆ ಕೇಳಿದ್ದರು.

ಪಿಲಿಚಂಡಿ ದೈವದ ನುಡಿ
ಪಿಲಿಚಂದಿ ಹೆಸರಿನ ದೈವ ಈ ಬಗ್ಗೆ ಭವಿಷ್ಯ ನುಡಿದಿತ್ತು. ‘ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನೋಡಿಕೊಳ್ಳುತ್ತೇನೆ. ಹಣವೆಲ್ಲ ಆಸ್ಪತ್ರೆ ಸೇರುವಂತೆ ಮಾಡುತ್ತೇನೆ. ನನ್ನನ್ನು ಅಪಚಾರ ಮಾಡುವವರಿಗೆ ಬುದ್ಧಿ ಕಲಿಸುತ್ತೇನೆ. ನೀವು ಹೋರಾಟವನ್ನು ಮುಂದುವರಿಸಿ. ನಾನು ನಿಮ್ಮ ಬೆನ್ನ ಹಿಂದೆ ಇದ್ದೇನೆ’ ಎಂದು ದೈವ ನುಡಿದಿತ್ತು.

ಆಡಳಿತ ಮಂಡಳಿ ಸ್ಪಷ್ಟನೆ..
ಮಂಗಳೂರು ತಾಲೂಕಿನ ಬಜಪೆ ಸಮೀಪದ ಪಡುಪೆರಾರ ಕ್ಷೇತ್ರದಲ್ಲಿರುವ ಬ್ರಹ್ಮ ದೇವರು ಬಲವಾಂಡಿ-ಪಿಲ್ಚಂಡಿ ದೈವಸ್ಥಾನದ ಆಡಳಿತ ಮಂಡಳಿ ದೈವದ ನುಡಿ ಕುರಿತು ಸ್ಪಷ್ಟನೆ ನೀಡಿದೆ. ‘ದೈವವು ನೀಡಿದ ಅಭಯ ನಡೆ ನುಡಿಗಳ ವಿಚಾರದಲ್ಲಿ ಗೊಂದಲ ಭಿನ್ನಾಭಿಪ್ರಾಯ ನಿರ್ಮಾಣವಾಗಿದೆ. ಕೆಲವು ಯುವಕರು ದೈವದ ಅಪಚಾರದ ಬಗ್ಗೆ ದೈವದ ಬಳಿ ನಿವೇದನೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ದೈವವು ಸೂಕ್ತ ಅಭಯ ನೀಡಿದೆ ಹೊರತು ಕಾಂತಾರ ಬಗ್ಗೆ ಯಾವುದೇ ನುಡಿಯನ್ನು ದೈವ ನೀಡಿರುವುದಿಲ್ಲ. ಯಾವುದೇ ಚಲನಚಿತ್ರದ ಬಗ್ಗೆಯೂ ದೈವ ಅಭಯ ನುಡಿ ನೀಡಿಲ್ಲ’ ಎಂದು ಸ್ಪಷ್ಟನೆ ಕೊಟ್ಟಿದೆ. ಈ ಮೂಲಕ ವಿವಾದಕ್ಕೆ ತೆರೆ ಬಿದ್ದಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

24 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago