Featured

ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯದ ನುಡಿ ನೀಡಿಲ್ಲ: ಆಡಳಿತ ಮಂಡಳಿ ಸ್ಪಷ್ಟನೆ – vishwanews24

ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯದ ನುಡಿ ನೀಡಿಲ್ಲ’:   ಆಡಳಿತ ಮಂಡಳಿ ಸ್ಪಷ್ಟನೆ

‘ಕಾಂತಾರ ಚಾಪ್ಟರ್ 1’ ಚಿತ್ರ ನೋಡಿ ಅನೇಕರು ದೈವವನ್ನು ಅನುಕರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ದೈವಕ್ಕೆ ಅಪಚಾರ ಆಗುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದವು. ಇತ್ತೀಚೆಗೆ ದೈವ ಹೇಳಿದ ಮಾತು ಕೂಡ ಚರ್ಚೆಗೆ ಕಾರಣ ಆಗಿತ್ತು. ‘ದೈವ ನುಡಿದಿದ್ದು ಕಾಂತಾರ ಚಿತ್ರದ ಬಗ್ಗೆಯೇ’ ಎಂದು ಅನೇಕರು ಹೇಳಿದ್ದರು. ಈ ಎಲ್ಲಾ ವಿಚಾರಗಳಿಗೆ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ‘ದೈವ ಕಾಂತಾರ ಸಿನಿಮಾ ಬಗ್ಗೆ ಏನನ್ನೂ ಹೇಳಿಲ್ಲ’ ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

‘ಕಾಂತಾರ ಚಾಪ್ಟರ್ 1’ ಸಿನಿಮಾ ರಿಲೀಸ್ ಆದ ಬಳಿಕ ಅನೇಕರು ದೈವದ ಅನುಕರಣೆ ಮಾಡುತ್ತಿದ್ದಾರೆ. ಥಿಯೇಟರ್ ಮುಂದೆ ಬಂದು ದೈವ ಬಂದಂತೆಲ್ಲ ನಡೆದುಕೊಂಡಿದ್ದಾರೆ. ದೈವದ ಅನುಕರಣೆ ಅನೇಕರಿಗೆ ಅಪಹಾಸ್ಯ ಮಾಡುತ್ತಿರುವ ರೀತಿ ಕಾಣಿಸಿದ್ದು, ದೈವಾರಾಧಕರು ವಿರೋಧ ಹೊರಹಾಕಿದ್ದರು. ಹೀಗಾಗಿ, ಕೆಲವರು ದೈವದ ಬಳಿ ಈ ಬಗ್ಗೆ ಪ್ರಶ್ನೆ ಕೇಳಿದ್ದರು.

ಪಿಲಿಚಂಡಿ ದೈವದ ನುಡಿ
ಪಿಲಿಚಂದಿ ಹೆಸರಿನ ದೈವ ಈ ಬಗ್ಗೆ ಭವಿಷ್ಯ ನುಡಿದಿತ್ತು. ‘ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನೋಡಿಕೊಳ್ಳುತ್ತೇನೆ. ಹಣವೆಲ್ಲ ಆಸ್ಪತ್ರೆ ಸೇರುವಂತೆ ಮಾಡುತ್ತೇನೆ. ನನ್ನನ್ನು ಅಪಚಾರ ಮಾಡುವವರಿಗೆ ಬುದ್ಧಿ ಕಲಿಸುತ್ತೇನೆ. ನೀವು ಹೋರಾಟವನ್ನು ಮುಂದುವರಿಸಿ. ನಾನು ನಿಮ್ಮ ಬೆನ್ನ ಹಿಂದೆ ಇದ್ದೇನೆ’ ಎಂದು ದೈವ ನುಡಿದಿತ್ತು.

ಆಡಳಿತ ಮಂಡಳಿ ಸ್ಪಷ್ಟನೆ..
ಮಂಗಳೂರು ತಾಲೂಕಿನ ಬಜಪೆ ಸಮೀಪದ ಪಡುಪೆರಾರ ಕ್ಷೇತ್ರದಲ್ಲಿರುವ ಬ್ರಹ್ಮ ದೇವರು ಬಲವಾಂಡಿ-ಪಿಲ್ಚಂಡಿ ದೈವಸ್ಥಾನದ ಆಡಳಿತ ಮಂಡಳಿ ದೈವದ ನುಡಿ ಕುರಿತು ಸ್ಪಷ್ಟನೆ ನೀಡಿದೆ. ‘ದೈವವು ನೀಡಿದ ಅಭಯ ನಡೆ ನುಡಿಗಳ ವಿಚಾರದಲ್ಲಿ ಗೊಂದಲ ಭಿನ್ನಾಭಿಪ್ರಾಯ ನಿರ್ಮಾಣವಾಗಿದೆ. ಕೆಲವು ಯುವಕರು ದೈವದ ಅಪಚಾರದ ಬಗ್ಗೆ ದೈವದ ಬಳಿ ನಿವೇದನೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ದೈವವು ಸೂಕ್ತ ಅಭಯ ನೀಡಿದೆ ಹೊರತು ಕಾಂತಾರ ಬಗ್ಗೆ ಯಾವುದೇ ನುಡಿಯನ್ನು ದೈವ ನೀಡಿರುವುದಿಲ್ಲ. ಯಾವುದೇ ಚಲನಚಿತ್ರದ ಬಗ್ಗೆಯೂ ದೈವ ಅಭಯ ನುಡಿ ನೀಡಿಲ್ಲ’ ಎಂದು ಸ್ಪಷ್ಟನೆ ಕೊಟ್ಟಿದೆ. ಈ ಮೂಲಕ ವಿವಾದಕ್ಕೆ ತೆರೆ ಬಿದ್ದಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

17 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

17 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

18 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

19 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

20 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

20 hours ago