ಕಾಂತಾರ’ ವಿವಾದಾತ್ಮಕ ಹೇಳಿಕೆ : ಚೇತನ್ ವಿರುದ್ಧದ ಎಫ್.ಐ.ಆರ್ ರದ್ದತಿಗೆ ನಿರಾಕರಿಸಿದ ಹೈಕೋರ್ಟ್  – Vishwanews24

Featured, ರಾಜ್ಯ ನ್ಯೂಸ್

ಕಾಂತಾರ’ ವಿವಾದಾತ್ಮಕ ಹೇಳಿಕೆ: ಚೇತನ್ ವಿರುದ್ಧದ ಎಫ್.ಐ.ಆರ್ ರದ್ದತಿಗೆ ನಿರಾಕರಿಸಿದ ಹೈಕೋರ್ಟ್ 

ಕರಾವಳಿ ದೈವಗಳ ಕುರಿತಾದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ, ಪ್ರಪಂಚದಾದ್ಯಂತ ತೆರೆಕಂಡ ಸಂದರ್ಭದಲ್ಲಿ ನಟ ಚೇತನ್, ಭೂತಕೋಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು.

ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ, ತಮ್ಮ ಮಾತುಗಳನ್ನು ಸಮರ್ಥಿಸಿಕೊಂಡೇ ಬಂದಿದ್ದರು ಚೇತನ್. ಆನಂತರ ತಮ್ಮ ಮೇಲಿನ ಎಫ್.ಐ.ಆರ್ ಅನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ ಮೋರೆ ಹೋಗಿದ್ದರು. ಇದೀಗ ಎಫ್.ಐ.ಆರ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ. ಈ ಅರ್ಜಿ ವಿಚಾರಣೆಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಪೀಠ, ಪ್ರಕರಣವಿನ್ನೂ ತನಿಖಾ ಹಂತದಲ್ಲಿ ಇರುವುದರಿಂದ ಈ ಹಂತದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಬಾರದು ಎಂದು ಅರ್ಜಿ ವಜಾಗೊಳಿಸಿದೆ. ಇದನ್ನೂ ಓದಿ: ಕಿಡ್ನ್ಯಾಪ್‌ ಮಾಡಿ , ಬಲವಂತವಾಗಿ ಆಲ್ಕೋಹಾಲ್‌ ಕುಡಿಸಿ ನಾಲ್ವರು ಮಹಿಳೆಯರಿಂದ ಯುವಕನ ಅತ್ಯಾಚಾರ – Vishwanews24

Actor Chetan: ನಟ ಚೇತನ್​ಗೆ ಜಾಮೀನು; ಆಕ್ಷೇಪಾರ್ಹ ಟ್ವೀಟ್​ ಪ್ರಕರಣದಲ್ಲಿ ರಿಲೀಫ್​ -  Actor Chetan Got Bail from Court in the case of offensive tweet | TV9  Kannada

ಚೇತನ್ ಪರ ವಕೀಲರು ‘ಅರ್ಜಿದಾರರ ಮಾತಿನಿಂದ ಸಮಾಜದಲ್ಲಿ ಅಶಾಂತಿ ಮೂಡಿಲ್ಲ. ಯಾರಿಗೂ ತೊಂದರೆ ಕೊಡುವ ಉದ್ದೇಶವೂ ಅವರದ್ದಲ್ಲ. ತೊಂದರೆಯೂ ಆಗಿಲ್ಲ. ಹಾಗಾಗಿ ಎಫ್.ಐ.ಆರ್ ರದ್ದು ಮಾಡಬೇಕು ಎಂದು ಮನವಿ ಮಾಡಿಕೊಂಡರು. ಇದಕ್ಕೆ ಸರಕಾರದ ಪರ ವಕೀಲರು ಆಕ್ಷೇಪಿಸಿದರು. ಉದ್ದೇಶಪೂರ್ವಕವಾಗಿಯೇ ಇಂತಹ ಹೇಳಿಕೆ ನೀಡಿದ್ದಾರೆ ಎಂದು ವಾದಿಸಿದರು. ಪ್ರಕರಣ ತನಿಖೆಯ ಹಂತದಲ್ಲಿ ಇರುವುದರಿಂದ ಎಫ್.ಐ.ಆರ್ ರದ್ದು ಮಾಡಬಾರದು ಎಂದು ಮನವಿ ಮಾಡಿದರು. ಇವರ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿತು.

ಭೂತಕೋಲದ ಬಗ್ಗೆ ಚೇತನ್ ಆಡಿದ ಮಾತುಗಳು ಅಂದು ಸಾಕಷ್ಟು ಟೀಕೆಗೆ ಗುರಿಯಾಗಿದ್ದವು. ಕರಾವಳಿಯ ದೈವಗಳ ಬಗ್ಗೆ ಚೇತನ್ ತಿಳಿದುಕೊಂಡು ಮಾತನಾಡಬೇಕು ಎಂದು ಹಲವರು ಸಲಹೆ ನೀಡಿದರು. ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದರು. ನಂತರ ದೂರು ದಾಖಲಾಗಿತ್ತು. ದೂರು ಇದೀಗ ತನಿಖಾ ಹಂತದಲ್ಲಿದ್ದು, ಚೇತನ್ ತನಿಖೆಯನ್ನು ಎದುರಿಸಬೇಕಿದೆ. ಇದನ್ನೂ ಓದಿ: ಮೈಸೂರು: ಕಾಡಾನೆ ದಾಳಿ.. ದಸರಾ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಆನೆ ದುರಂತ ಅಂತ್ಯ – Vishwanews24

ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂದ ನಟ ಚೇತನ್ | ಕಾಂತಾರ ಅಭಿಮಾನಿಗಳ ಕಿಡಿ - ವಿಸ್ತಾರ  ನ್ಯೂಸ್

Leave a Reply