ಕರಾವಳಿ ದೈವಗಳ ಕುರಿತಾದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ, ಪ್ರಪಂಚದಾದ್ಯಂತ ತೆರೆಕಂಡ ಸಂದರ್ಭದಲ್ಲಿ ನಟ ಚೇತನ್, ಭೂತಕೋಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು.
ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ, ತಮ್ಮ ಮಾತುಗಳನ್ನು ಸಮರ್ಥಿಸಿಕೊಂಡೇ ಬಂದಿದ್ದರು ಚೇತನ್. ಆನಂತರ ತಮ್ಮ ಮೇಲಿನ ಎಫ್.ಐ.ಆರ್ ಅನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ ಮೋರೆ ಹೋಗಿದ್ದರು. ಇದೀಗ ಎಫ್.ಐ.ಆರ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ. ಈ ಅರ್ಜಿ ವಿಚಾರಣೆಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಪೀಠ, ಪ್ರಕರಣವಿನ್ನೂ ತನಿಖಾ ಹಂತದಲ್ಲಿ ಇರುವುದರಿಂದ ಈ ಹಂತದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಬಾರದು ಎಂದು ಅರ್ಜಿ ವಜಾಗೊಳಿಸಿದೆ. ಇದನ್ನೂ ಓದಿ: ಕಿಡ್ನ್ಯಾಪ್ ಮಾಡಿ , ಬಲವಂತವಾಗಿ ಆಲ್ಕೋಹಾಲ್ ಕುಡಿಸಿ ನಾಲ್ವರು ಮಹಿಳೆಯರಿಂದ ಯುವಕನ ಅತ್ಯಾಚಾರ – Vishwanews24
ಚೇತನ್ ಪರ ವಕೀಲರು ‘ಅರ್ಜಿದಾರರ ಮಾತಿನಿಂದ ಸಮಾಜದಲ್ಲಿ ಅಶಾಂತಿ ಮೂಡಿಲ್ಲ. ಯಾರಿಗೂ ತೊಂದರೆ ಕೊಡುವ ಉದ್ದೇಶವೂ ಅವರದ್ದಲ್ಲ. ತೊಂದರೆಯೂ ಆಗಿಲ್ಲ. ಹಾಗಾಗಿ ಎಫ್.ಐ.ಆರ್ ರದ್ದು ಮಾಡಬೇಕು ಎಂದು ಮನವಿ ಮಾಡಿಕೊಂಡರು. ಇದಕ್ಕೆ ಸರಕಾರದ ಪರ ವಕೀಲರು ಆಕ್ಷೇಪಿಸಿದರು. ಉದ್ದೇಶಪೂರ್ವಕವಾಗಿಯೇ ಇಂತಹ ಹೇಳಿಕೆ ನೀಡಿದ್ದಾರೆ ಎಂದು ವಾದಿಸಿದರು. ಪ್ರಕರಣ ತನಿಖೆಯ ಹಂತದಲ್ಲಿ ಇರುವುದರಿಂದ ಎಫ್.ಐ.ಆರ್ ರದ್ದು ಮಾಡಬಾರದು ಎಂದು ಮನವಿ ಮಾಡಿದರು. ಇವರ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿತು.
ಭೂತಕೋಲದ ಬಗ್ಗೆ ಚೇತನ್ ಆಡಿದ ಮಾತುಗಳು ಅಂದು ಸಾಕಷ್ಟು ಟೀಕೆಗೆ ಗುರಿಯಾಗಿದ್ದವು. ಕರಾವಳಿಯ ದೈವಗಳ ಬಗ್ಗೆ ಚೇತನ್ ತಿಳಿದುಕೊಂಡು ಮಾತನಾಡಬೇಕು ಎಂದು ಹಲವರು ಸಲಹೆ ನೀಡಿದರು. ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದರು. ನಂತರ ದೂರು ದಾಖಲಾಗಿತ್ತು. ದೂರು ಇದೀಗ ತನಿಖಾ ಹಂತದಲ್ಲಿದ್ದು, ಚೇತನ್ ತನಿಖೆಯನ್ನು ಎದುರಿಸಬೇಕಿದೆ. ಇದನ್ನೂ ಓದಿ: ಮೈಸೂರು: ಕಾಡಾನೆ ದಾಳಿ.. ದಸರಾ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಆನೆ ದುರಂತ ಅಂತ್ಯ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…