ಕರಾವಳಿ ದೈವಗಳ ಕುರಿತಾದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ, ಪ್ರಪಂಚದಾದ್ಯಂತ ತೆರೆಕಂಡ ಸಂದರ್ಭದಲ್ಲಿ ನಟ ಚೇತನ್, ಭೂತಕೋಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು.
ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ, ತಮ್ಮ ಮಾತುಗಳನ್ನು ಸಮರ್ಥಿಸಿಕೊಂಡೇ ಬಂದಿದ್ದರು ಚೇತನ್. ಆನಂತರ ತಮ್ಮ ಮೇಲಿನ ಎಫ್.ಐ.ಆರ್ ಅನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ ಮೋರೆ ಹೋಗಿದ್ದರು. ಇದೀಗ ಎಫ್.ಐ.ಆರ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ. ಈ ಅರ್ಜಿ ವಿಚಾರಣೆಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಪೀಠ, ಪ್ರಕರಣವಿನ್ನೂ ತನಿಖಾ ಹಂತದಲ್ಲಿ ಇರುವುದರಿಂದ ಈ ಹಂತದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಬಾರದು ಎಂದು ಅರ್ಜಿ ವಜಾಗೊಳಿಸಿದೆ. ಇದನ್ನೂ ಓದಿ: ಕಿಡ್ನ್ಯಾಪ್ ಮಾಡಿ , ಬಲವಂತವಾಗಿ ಆಲ್ಕೋಹಾಲ್ ಕುಡಿಸಿ ನಾಲ್ವರು ಮಹಿಳೆಯರಿಂದ ಯುವಕನ ಅತ್ಯಾಚಾರ – Vishwanews24
ಚೇತನ್ ಪರ ವಕೀಲರು ‘ಅರ್ಜಿದಾರರ ಮಾತಿನಿಂದ ಸಮಾಜದಲ್ಲಿ ಅಶಾಂತಿ ಮೂಡಿಲ್ಲ. ಯಾರಿಗೂ ತೊಂದರೆ ಕೊಡುವ ಉದ್ದೇಶವೂ ಅವರದ್ದಲ್ಲ. ತೊಂದರೆಯೂ ಆಗಿಲ್ಲ. ಹಾಗಾಗಿ ಎಫ್.ಐ.ಆರ್ ರದ್ದು ಮಾಡಬೇಕು ಎಂದು ಮನವಿ ಮಾಡಿಕೊಂಡರು. ಇದಕ್ಕೆ ಸರಕಾರದ ಪರ ವಕೀಲರು ಆಕ್ಷೇಪಿಸಿದರು. ಉದ್ದೇಶಪೂರ್ವಕವಾಗಿಯೇ ಇಂತಹ ಹೇಳಿಕೆ ನೀಡಿದ್ದಾರೆ ಎಂದು ವಾದಿಸಿದರು. ಪ್ರಕರಣ ತನಿಖೆಯ ಹಂತದಲ್ಲಿ ಇರುವುದರಿಂದ ಎಫ್.ಐ.ಆರ್ ರದ್ದು ಮಾಡಬಾರದು ಎಂದು ಮನವಿ ಮಾಡಿದರು. ಇವರ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿತು.
ಭೂತಕೋಲದ ಬಗ್ಗೆ ಚೇತನ್ ಆಡಿದ ಮಾತುಗಳು ಅಂದು ಸಾಕಷ್ಟು ಟೀಕೆಗೆ ಗುರಿಯಾಗಿದ್ದವು. ಕರಾವಳಿಯ ದೈವಗಳ ಬಗ್ಗೆ ಚೇತನ್ ತಿಳಿದುಕೊಂಡು ಮಾತನಾಡಬೇಕು ಎಂದು ಹಲವರು ಸಲಹೆ ನೀಡಿದರು. ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದರು. ನಂತರ ದೂರು ದಾಖಲಾಗಿತ್ತು. ದೂರು ಇದೀಗ ತನಿಖಾ ಹಂತದಲ್ಲಿದ್ದು, ಚೇತನ್ ತನಿಖೆಯನ್ನು ಎದುರಿಸಬೇಕಿದೆ. ಇದನ್ನೂ ಓದಿ: ಮೈಸೂರು: ಕಾಡಾನೆ ದಾಳಿ.. ದಸರಾ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಆನೆ ದುರಂತ ಅಂತ್ಯ – Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…