Featured

ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ : ರಾಕೇಶ್ ನಿಧನಕ್ಕೆ ರಿಷಬ್ ಶೆಟ್ಟಿ ಸಂತಾಪ – vishwanews24

ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಅದ್ಭುತ ಕಲಾವಿದ : ರಾಕೇಶ್‌ ನಿಧನಕ್ಕೆ ರಿಷಬ್‌ ಸಂತಾಪ

ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ನಿಧನ ಚಿತ್ರರಂಗಕ್ಕೆ ಶಾಕ್ ನೀಡಿದೆ. ಇದೀಗ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ‘ಕಾಂತಾರ ಚಾಪ್ಟರ್ 1’ರಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ತುಂಬಲಾರದ ನಷ್ಟ ಎಂದು ಬರೆದುಕೊಂಡಿದ್ದಾರೆ.

Rakesh Poojariನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ‘ಕಾಂತಾರ’  ಸಿನಿಮಾದಲ್ಲಿ ನಿನ್ನ ಪಾತ್ರ ಹಾಗೂ ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ. ಮತ್ತೆ ಹುಟ್ಟಿ ಬಾ ಗೆಳೆಯ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ ಶಕ್ತಿ ನಿನ್ನ ಕುಟುಂಬಕ್ಕೆ ಕೊಡಲಿ ಎಂದು ರಾಕೇಶ್‌ ಬಗ್ಗೆ ರಿಷಬ್ ಶೆಟ್ಟಿ ಪೋಸ್ಟ್ ಹಂಚಿಕೊಂಡಿದ್ದಾರೆ.

ನಟ ರಾಕೇಶ್ ಪೂಜಾರಿ  ನಿಧನಕ್ಕೆ ತೀವ್ರ ಸಂತಾಪಗಳು. ಈ ನೋವನ್ನು ಭರಿಸುವ ಶಕ್ತಿ ಕುಟುಂಬಸ್ಥರಿಗೆ, ಅವರ ಆಪ್ತರಿಗೆ ಹಾಗೂ ಹಿತೈಷಿಗಳಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ. ಈ ದುಃಖದ ಘಳಿಗೆಯಲ್ಲಿ ನಾವೆಲ್ಲರೂ ಅವರ ಕುಟುಂಬದೊಂದಿಗೆ ಇದ್ದೇವೆ ಎಂದು ಕಾಂತಾರ ಸಿನಿಮಾ ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲ್ಮ್ಸ್‌ ರಾಕೇಶ್ ಅಗಲಿಕೆಗೆ ಸಂತಾಪ ಸೂಚಿಸಿದೆ.

ಮೇ 12ರಂದು ರಾಕೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ವೇಳೆ, ಅನುಶ್ರೀ, ರಕ್ಷಿತಾ ಪ್ರೇಮ್, ಯೋಗರಾಜ್ ಭಟ್, ಕಾಮಿಡಿ ಕಿಲಾಡಿಗಳು ತಂಡದ ಕಲಾವಿದರು ಭಾಗಿಯಾಗಿ ಅಂತಿಮ ದರ್ಶನ ಪಡೆದರು. ನಿನ್ನೆ ಸಂಜೆ ಉಡುಪಿ ಹೂಡೆಯ ರುದ್ರಭೂಮಿಯಲ್ಲಿ ಬಿಲ್ಲವ ಸಂಪ್ರದಾಯದಂತೆ ನಟನ ಅಂತ್ಯಕ್ರಿಯೆ ನಡೆಯಿತು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 days ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago