Featured

ಕಾಂತಾರ ಸಿನಿಮಾವನ್ನು ವಿರೇಂದ್ರ ಹೆಗ್ಗಡೆ ಅವರು ನೋಡಿದ್ದು ದೇವರೇ ನೋಡಿದ್ದಷ್ಟು ಸಂತಸವಾಯಿತು : ಧರ್ಮಸ್ಥಳದಲ್ಲಿ ರಿಷಬ್ ಶೆಟ್ಟಿ – Vishwanews24

ಕಾಂತಾರ ಸಿನಿಮಾವನ್ನು ವಿರೇಂದ್ರ ಹೆಗ್ಗಡೆ ಅವರು ನೋಡಿದ್ದು ದೇವರೇ ನೋಡಿದ್ದಷ್ಟು ಸಂತಸವಾಯಿತು ..

ವರಾಹ ರೂಪಂ ಹಾಡಿನ ವಿವಾದದ ಬಗ್ಗೆ ನಮ್ಮ ನಿರ್ಮಾಪಕರು ಹಾಗೂ ಸಂಗೀತ ನಿರ್ದೇಶಕರು ಸೂಕ್ತ ಉತ್ತರ ನೀಡುತ್ತಾರೆ’..

ಧರ್ಮಸ್ಥಳದಲ್ಲಿ ರಿಷಬ್ ಶೆಟ್ಟಿ ..

ಸದ್ಯ ದೇಶದಾದ್ಯಂತ ಕಾಂತಾರ ಸಿನಿಮಾದೇ ಹವಾ. ರಿಷಬ್ ಶೆಟ್ಟಿ ನಿರ್ದೇಶ ಮಾಡಿ, ನಟಿಸಿರುವ ಕಾಂತಾರ ಸಿನಿಮಾಗೆ ದೊಡ್ಡ ಮಟ್ಟದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಪ್ರಿಯತೆ ಬೆನ್ನಲ್ಲೇ ಚಿತ್ರದ ಸುಪ್ರಸಿದ್ಧ ವರಾಹ ರೂಪಮ್ ಹಾಡಿನ ಬಗ್ಗೆ ವಿವಾದ ಸೃಷ್ಟಿಯಾಗಿದೆ. ಈ ಹಾಡು ಮಲಾಯಳಂ ಆಲ್ಬಂ ಸಾಂಗ್ ಒಂದರ ಕಾಪಿ ಎನ್ನುವ ಆರೋಪ ಕೇಳಿಬಂದಿದೆ. ಅಲ್ಲದೆ ಆಲ್ಬಂ ಹಾಡಿನ ಮೂಲ ತಯಾರಾಕರು ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ನಟ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚಿಗಷ್ಟೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟ ರಿಷಬ್ ಶೆಟ್ಟಿ ಈ ಬಗ್ಗೆ ಮಾತನಾಡಿದ್ದಾರೆ.

‘ಸಿನಿಮಾದ ಜನಪ್ರಿಯ‘ವರಾಹ ರೂಪಂ.. ನಮ್ಮ ಸಂಗೀತ ನಿರ್ದೇಶಕರು ಸ್ವಂತ ಮಾಡಿದ ಹಾಡು ಅದು. ಸಿನಿಮಾ ಹಿಟ್‌ ಆದಾಗ ಇಂಥ ಆರೋಪಗಳು ಬರುವುದು ಸಹಜ. ಈ ವಿವಾದಕ್ಕೆ ನಮ್ಮ ನಿರ್ಮಾಪಕರು ಹಾಗೂ ಸಂಗೀತ ನಿರ್ದೇಶಕರು ಸೂಕ್ತ ಉತ್ತರ ನೀಡುತ್ತಾರೆ’ ಎಂದು ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ‘ಸಿನಿಮಾ ಬಿಡುಗಡೆಗೆ ಮುಂಚೆ ಇಲ್ಲಿಗೆ ಬಂದು ಆಶೀರ್ವಾದ ತೆಗೆದುಕೊಂಡು ಹೋಗಿದ್ದೆ. ಟ್ರೇಲರ್‌ ಬಿಡುಗಡೆ ಆದಾಗ ಬಂದಿದ್ದೆ. ಸಿನಿಮಾ ಬಿಡುಗಡೆಯಾಗಿ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಯಶಸ್ವಿಯಾಯಿತು. ಡಾ.ಹೆಗ್ಗಡೆ ಕುಟುಂಬ ಸಮೇತ ಸಿನಿಮಾ ನೋಡಿದ ಸಂದರ್ಭದಲ್ಲಿ ಭೇಟಿಯಾಗಲು ಆಗಲಿಲ್ಲ. ಈಗ ಕಾಲ ಕೂಡಿ ಬಂದು ಭೇಟಿಯಾಗಿದ್ದೇನೆ’ ಎಂದು ರಿಷಬ್ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಗ್ಗೆ ವಿವರಿಸಿದರು.

ಮುಲ್ಕಿ: ಪಾದಾಚಾರಿ ಮಹಿಳೆಗೆ ಕಾರು ಡಿಕ್ಕಿ ; ಮಹಿಳೆ ಗಂಭೀರ ಗಾಯ – Vishwanews24

ಇನ್ನು ಕಾಂತಾರ ಸಿನಿಮಾವನ್ನು ವಿರೇಂದ್ರ ಹೆಗ್ಗಡೆ ಅವರು ನೋಡಿದ್ದು ದೇವರೇ ನೋಡಿದ್ದಷ್ಟು ಸಂತಸವಾಯಿತು ಎಂದು ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಹೇಳಿದರು. ‘ಡಾ. ವಿರೇಂದ್ರ ಹೆಗ್ಗಡೆ ಅವರು ಸಿನಿಮಾ ನೋಡಿದ್ದು ದೇವರೇ ಸಿನಿಮಾ ನೋಡಿದಷ್ಟು ಖುಷಿಯಾಯಿತು’ ಎಂದು ಪ್ರಗತಿ ಶೆಟ್ಟಿ ಹೇಳಿದರು. ರಿಷಬ್ ದಂಪತಿ, ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್‌ ಮತ್ತು ಸುಪ್ರಿಯಾ ಹಷೇಂದ್ರ ಕುಮಾರ್‌ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 hour ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

2 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago