Featured

ಕಾಂತಾರ ಸಿನಿಮಾವನ್ನು ವಿರೇಂದ್ರ ಹೆಗ್ಗಡೆ ಅವರು ನೋಡಿದ್ದು ದೇವರೇ ನೋಡಿದ್ದಷ್ಟು ಸಂತಸವಾಯಿತು : ಧರ್ಮಸ್ಥಳದಲ್ಲಿ ರಿಷಬ್ ಶೆಟ್ಟಿ – Vishwanews24

ಕಾಂತಾರ ಸಿನಿಮಾವನ್ನು ವಿರೇಂದ್ರ ಹೆಗ್ಗಡೆ ಅವರು ನೋಡಿದ್ದು ದೇವರೇ ನೋಡಿದ್ದಷ್ಟು ಸಂತಸವಾಯಿತು ..

ವರಾಹ ರೂಪಂ ಹಾಡಿನ ವಿವಾದದ ಬಗ್ಗೆ ನಮ್ಮ ನಿರ್ಮಾಪಕರು ಹಾಗೂ ಸಂಗೀತ ನಿರ್ದೇಶಕರು ಸೂಕ್ತ ಉತ್ತರ ನೀಡುತ್ತಾರೆ’..

ಧರ್ಮಸ್ಥಳದಲ್ಲಿ ರಿಷಬ್ ಶೆಟ್ಟಿ ..

ಸದ್ಯ ದೇಶದಾದ್ಯಂತ ಕಾಂತಾರ ಸಿನಿಮಾದೇ ಹವಾ. ರಿಷಬ್ ಶೆಟ್ಟಿ ನಿರ್ದೇಶ ಮಾಡಿ, ನಟಿಸಿರುವ ಕಾಂತಾರ ಸಿನಿಮಾಗೆ ದೊಡ್ಡ ಮಟ್ಟದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಪ್ರಿಯತೆ ಬೆನ್ನಲ್ಲೇ ಚಿತ್ರದ ಸುಪ್ರಸಿದ್ಧ ವರಾಹ ರೂಪಮ್ ಹಾಡಿನ ಬಗ್ಗೆ ವಿವಾದ ಸೃಷ್ಟಿಯಾಗಿದೆ. ಈ ಹಾಡು ಮಲಾಯಳಂ ಆಲ್ಬಂ ಸಾಂಗ್ ಒಂದರ ಕಾಪಿ ಎನ್ನುವ ಆರೋಪ ಕೇಳಿಬಂದಿದೆ. ಅಲ್ಲದೆ ಆಲ್ಬಂ ಹಾಡಿನ ಮೂಲ ತಯಾರಾಕರು ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ನಟ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚಿಗಷ್ಟೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟ ರಿಷಬ್ ಶೆಟ್ಟಿ ಈ ಬಗ್ಗೆ ಮಾತನಾಡಿದ್ದಾರೆ.

‘ಸಿನಿಮಾದ ಜನಪ್ರಿಯ‘ವರಾಹ ರೂಪಂ.. ನಮ್ಮ ಸಂಗೀತ ನಿರ್ದೇಶಕರು ಸ್ವಂತ ಮಾಡಿದ ಹಾಡು ಅದು. ಸಿನಿಮಾ ಹಿಟ್‌ ಆದಾಗ ಇಂಥ ಆರೋಪಗಳು ಬರುವುದು ಸಹಜ. ಈ ವಿವಾದಕ್ಕೆ ನಮ್ಮ ನಿರ್ಮಾಪಕರು ಹಾಗೂ ಸಂಗೀತ ನಿರ್ದೇಶಕರು ಸೂಕ್ತ ಉತ್ತರ ನೀಡುತ್ತಾರೆ’ ಎಂದು ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ‘ಸಿನಿಮಾ ಬಿಡುಗಡೆಗೆ ಮುಂಚೆ ಇಲ್ಲಿಗೆ ಬಂದು ಆಶೀರ್ವಾದ ತೆಗೆದುಕೊಂಡು ಹೋಗಿದ್ದೆ. ಟ್ರೇಲರ್‌ ಬಿಡುಗಡೆ ಆದಾಗ ಬಂದಿದ್ದೆ. ಸಿನಿಮಾ ಬಿಡುಗಡೆಯಾಗಿ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಯಶಸ್ವಿಯಾಯಿತು. ಡಾ.ಹೆಗ್ಗಡೆ ಕುಟುಂಬ ಸಮೇತ ಸಿನಿಮಾ ನೋಡಿದ ಸಂದರ್ಭದಲ್ಲಿ ಭೇಟಿಯಾಗಲು ಆಗಲಿಲ್ಲ. ಈಗ ಕಾಲ ಕೂಡಿ ಬಂದು ಭೇಟಿಯಾಗಿದ್ದೇನೆ’ ಎಂದು ರಿಷಬ್ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಗ್ಗೆ ವಿವರಿಸಿದರು.

ಮುಲ್ಕಿ: ಪಾದಾಚಾರಿ ಮಹಿಳೆಗೆ ಕಾರು ಡಿಕ್ಕಿ ; ಮಹಿಳೆ ಗಂಭೀರ ಗಾಯ – Vishwanews24

ಇನ್ನು ಕಾಂತಾರ ಸಿನಿಮಾವನ್ನು ವಿರೇಂದ್ರ ಹೆಗ್ಗಡೆ ಅವರು ನೋಡಿದ್ದು ದೇವರೇ ನೋಡಿದ್ದಷ್ಟು ಸಂತಸವಾಯಿತು ಎಂದು ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಹೇಳಿದರು. ‘ಡಾ. ವಿರೇಂದ್ರ ಹೆಗ್ಗಡೆ ಅವರು ಸಿನಿಮಾ ನೋಡಿದ್ದು ದೇವರೇ ಸಿನಿಮಾ ನೋಡಿದಷ್ಟು ಖುಷಿಯಾಯಿತು’ ಎಂದು ಪ್ರಗತಿ ಶೆಟ್ಟಿ ಹೇಳಿದರು. ರಿಷಬ್ ದಂಪತಿ, ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್‌ ಮತ್ತು ಸುಪ್ರಿಯಾ ಹಷೇಂದ್ರ ಕುಮಾರ್‌ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

Vishwa News 24

Recent Posts

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ – vishwanews24

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…

16 hours ago

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…

16 hours ago

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು – vishwanews24

ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…

16 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ – vishwanews24

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ…

16 hours ago

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ – vishwanews24

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…

16 hours ago

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ – vishwanews24

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…

17 hours ago