ಕಾಂತಾರ 2 ಸಿನಿಮಾ ಮಾಡಲು ವೀರೇಂದ್ರ ಹೆಗ್ಗಡೆಯವರ ಅನುಮತಿ ಕೇಳುವಂತೆ ದೈವ ನುಡಿದಿರುವುದಾಗಿ ದೈವ ನರ್ತಕ ಉಮೇಶ್ ಪಂಬದ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ‘ತಿಂಗಳ ಮೊದಲು ರಿಷಬ್ ಶೆಟ್ಟಿ ಹರಕೆ ನೇಮ ಕೊಡುವುದಾಗಿ ಹೇಳಿ ವೀಳ್ಯ ಕೊಟ್ಟಿದ್ದರು. ಮೊನ್ನೆ ರಿಷಬ್ ಮತ್ತು ಅವರ ತಂಡ ಬಂದು ದೈವದ ಹರಕೆ ಕೊಟ್ಟರು. ಚೆಂದದಿಂದ ದೈವ ಹರಕೆ ಸ್ವೀಕರಿಸಿ ಅವರಿಗೆ ಅಭಯ ಕೊಟ್ಟಿದೆ. ನಮಗೆ ಅವರ ಪರಿಚಯ ಇರಲಿಲ್ಲ, ನಡೆಸಿಕೊಟ್ಟವರು ಮಡಿವಾಳ ಕುಟುಂಬದವರು. ದೈವದ ನಡೆಯಲ್ಲಿ ಆದ ವಿಷಯ ನನಗೆ ಗೊತ್ತಿರಲ್ಲ, ಅದು ದೈವಕ್ಕೆ ಮಾತ್ರ ಗೊತ್ತಿರುತ್ತೆ. ದೈವದ ನೇಮೋತ್ಸವ ಆದ ನಂತರ ನನಗೆ ಭಕ್ತರು ಬಂದು ಈ ಬಗ್ಗೆ ಹೇಳಿದರು’ ಎಂದರು.
ಕಾಂತಾರ 2 ಸಿನಿಮಾ ಅನುಮತಿ ಬಗ್ಗೆ ಮಾತನಾಡಿದ ಉಮೇಶ್, ‘ಕಾಂತಾರ 2 ಸಿನಿಮಾ ಮಾಡಲು ದೈವ ಅನುಮತಿ ಕೊಟ್ಟಿದೆ ಅಂತ ನನಗೆ ಭಕ್ತರು ಹೇಳಿದರು. ರಿಷಬ್ ಶೆಟ್ಟಿ ಎರಡನೇ ಭಾಗದ ಬಗ್ಗೆ ದೈವದ ಬಳಿ ಕೇಳಿದರು. ಆದರೆ ಅದಕ್ಕೆ ಮೊದಲು ಧರ್ಮಸ್ಥಳ ಮಂಜುನಾಥೇಶ್ವರನ ಅನುಮತಿ ಕೇಳಲು ದೈವ ಹೇಳಿದೆಯಂತೆ. ಬಹಳ ಆಲೋಚನೆಯಲ್ಲಿ ಮುಂದಿನ ಸಿನಿಮಾ ಮಾಡಿ ಅಂತ ದೈವ ಹೇಳಿದೆಯಂತೆ. ಮೊದಲ ಚಿತ್ರದಲ್ಲಿ ಒಳ್ಳೆಯದು ಆಗಿದೆ, ಅಪವಾದವೂ ಬಂದಿದೆ. ಹತ್ತು ಹೆಜ್ಜೆ ಇಟ್ಟು ಆ ಸಿನಿಮಾ ಮಾಡಿದ್ದೀರಿ, ಇದಕ್ಕೆ ನೂರು ಹೆಜ್ಜೆ ಇಡಿ ಅಂತ ದೈವ ಹೇಳಿದೆ. ಧರ್ಮ ಪ್ರಕಾರ, ಆಚಾರ ವಿಚಾರದಲ್ಲಿ ಹೋಗಲು ದೈವ ಹೇಳಿದೆ’ ಎಂದಿದ್ದಾರೆ.
ರಿಷಬ್ ಶೆಟ್ಟಿ ಅವರು ಧರ್ಮಸ್ಥಳಕ್ಕೆ ಹೋಗ್ತಾ ಇರ್ತಾರೆ, ಮೊನ್ನೆ ದೈವವೂ ಧರ್ಮಸ್ಥಳಕ್ಕೆ ಹೋಗಲು ಅಪ್ಪಣೆ ಆಗಿದೆ. ಕಾಂತಾರ 2 ಮಾಡುವ ಮುನ್ನ ಖಾವಂದರ(ಹೆಗ್ಗಡೆ) ಬಳಿ ಅನುಮತಿ ಕೇಳಲು ದೈವ ಅಪ್ಪಣೆ ಕೊಟ್ಟಿದೆಯಂತೆ. ರಿಷಬ್ ಬಹಳ ಒಳ್ಳೆಯವರು, ಬಹಳ ಸಂತೋಷದಿಂದ ಎಲ್ಲರಲ್ಲೂ ಇದ್ದರು. ನೇಮೋತ್ಸವದ ವೇಳೆಯೂ ಬಹಳ ಶುದ್ದಾಚಾರದಿಂದ ಅವರು ನಡೆಸಿಕೊಟ್ಟಿದ್ದಾರೆ. ನಾನು ನೋಡಿದ ಮಟ್ಟಿಗೆ ಅವರ ಸೇವೆ ನಮಗೆ ಸಂತೋಷ ಆಗಿದೆ, ಉಳಿದಿದ್ದು ದೈವಕ್ಕೆ ಬಿಟ್ಟಿದ್ದು. ದೈವದ ವಿಷಯದಲ್ಲಿ ಕೆಟ್ಟದ್ದು ಮಾಡಬಾರದು, ತಿಳಿದು ಮಾಡಲೇ ಬಾರದು. ಕಾಂತಾರ ಭಾಗ 2 ಮಾಡಲು ಅವರು ಮತ್ತಷ್ಟು ಶುದ್ದಾಚಾರ ಪಾಲಿಸಬೇಕು. ಮೊದಲ ಚಿತ್ರದಲ್ಲಿ ಬಹಳ ಶುದ್ದಾಚಾರ ಪಾಲಿಸಿ ಭಕ್ತಿಯಿಂದ ಮಾಡಿದ್ದಾರೆ. ಹಾಗಾಗಿ ಎರಡನೇ ಭಾಗವನ್ನೂ ಅವರು ಅಷ್ಟೇ ಶುದ್ದಾಚಾರದಿಂದ ಮಾಡ್ತಾರೆ ಅನ್ನೋ ನಂಬಿಕೆ ಇದೆ’ ಎಂದಿದ್ದಾರೆ ಉಮೇಶ್ ಪಂಬದ.
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…