Featured

ಕಾಂತಾರ 2 ಮಾಡುವ ಮೊದಲು ವೀರೇಂದ್ರ ಹೆಗ್ಗಡೆಯವರ ಅನುಮತಿ ಕೇಳಲು ದೈವ ಅಪ್ಪಣೆ ‌ಕೊಟ್ಟಿದೆ: ದೈವ ನರ್ತಕ ಉಮೇಶ್ ಪಂಬದ – Vishwanews24

ಕಾಂತಾರ 2 ಮಾಡುವ ಮೊದಲು ವೀರೇಂದ್ರ ಹೆಗ್ಗಡೆಯವರ ಅನುಮತಿ ಕೇಳಲು ದೈವ ಅಪ್ಪಣೆ ‌ಕೊಟ್ಟಿದೆ: ದೈವ ನರ್ತಕ ಉಮೇಶ್ ಪಂಬದ

ಕಾಂತಾರ 2 ಸಿನಿಮಾ ಮಾಡಲು ವೀರೇಂದ್ರ ಹೆಗ್ಗಡೆಯವರ ಅನುಮತಿ ಕೇಳುವಂತೆ ದೈವ ನುಡಿದಿರುವುದಾಗಿ ದೈವ ನರ್ತಕ ಉಮೇಶ್ ಪಂಬದ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ‘ತಿಂಗಳ ಮೊದಲು ರಿಷಬ್ ಶೆಟ್ಟಿ ಹರಕೆ ನೇಮ ಕೊಡುವುದಾಗಿ ಹೇಳಿ ವೀಳ್ಯ ಕೊಟ್ಟಿದ್ದರು. ಮೊನ್ನೆ ರಿಷಬ್ ಮತ್ತು ಅವರ ತಂಡ ಬಂದು ದೈವದ ಹರಕೆ ಕೊಟ್ಟರು. ಚೆಂದದಿಂದ ದೈವ ಹರಕೆ ಸ್ವೀಕರಿಸಿ ಅವರಿಗೆ ಅಭಯ ಕೊಟ್ಟಿದೆ. ನಮಗೆ ಅವರ ಪರಿಚಯ ಇರಲಿಲ್ಲ, ನಡೆಸಿಕೊಟ್ಟವರು ಮಡಿವಾಳ ಕುಟುಂಬದವರು. ದೈವದ ನಡೆಯಲ್ಲಿ ಆದ ವಿಷಯ ನನಗೆ ಗೊತ್ತಿರಲ್ಲ, ಅದು ದೈವಕ್ಕೆ ‌ಮಾತ್ರ ಗೊತ್ತಿರುತ್ತೆ. ದೈವದ ನೇಮೋತ್ಸವ ಆದ ನಂತರ ನನಗೆ ಭಕ್ತರು ಬಂದು ಈ ಬಗ್ಗೆ ಹೇಳಿದರು’ ಎಂದರು.

ಕಾಂತಾರ 2 ಸಿನಿಮಾ ಅನುಮತಿ ಬಗ್ಗೆ ಮಾತನಾಡಿದ ಉಮೇಶ್, ‘ಕಾಂತಾರ 2 ಸಿನಿಮಾ ‌ಮಾಡಲು ದೈವ ಅನುಮತಿ ಕೊಟ್ಟಿದೆ ಅಂತ ನನಗೆ ಭಕ್ತರು ಹೇಳಿದರು. ರಿಷಬ್ ಶೆಟ್ಟಿ ಎರಡನೇ ಭಾಗದ ಬಗ್ಗೆ ದೈವದ ಬಳಿ ಕೇಳಿದರು. ಆದರೆ ಅದಕ್ಕೆ ಮೊದಲು ಧರ್ಮಸ್ಥಳ ಮಂಜುನಾಥೇಶ್ವರನ ಅನುಮತಿ ಕೇಳಲು ದೈವ ಹೇಳಿದೆಯಂತೆ. ಬಹಳ ಆಲೋಚನೆಯಲ್ಲಿ ಮುಂದಿನ ಸಿನಿಮಾ ಮಾಡಿ ಅಂತ ದೈವ ಹೇಳಿದೆಯಂತೆ. ಮೊದಲ ಚಿತ್ರದಲ್ಲಿ ಒಳ್ಳೆಯದು ಆಗಿದೆ, ಅಪವಾದವೂ ಬಂದಿದೆ. ಹತ್ತು ಹೆಜ್ಜೆ ಇಟ್ಟು ಆ ಸಿನಿಮಾ ‌ಮಾಡಿದ್ದೀರಿ, ಇದಕ್ಕೆ ನೂರು ಹೆಜ್ಜೆ ಇಡಿ ಅಂತ ದೈವ ಹೇಳಿದೆ. ಧರ್ಮ ಪ್ರಕಾರ, ಆಚಾರ ವಿಚಾರದಲ್ಲಿ ಹೋಗಲು ದೈವ ಹೇಳಿದೆ’ ಎಂದಿದ್ದಾರೆ.

ರಿಷಬ್ ಶೆಟ್ಟಿ ಅವರು ಧರ್ಮಸ್ಥಳಕ್ಕೆ ಹೋಗ್ತಾ ಇರ್ತಾರೆ, ಮೊನ್ನೆ ದೈವವೂ ಧರ್ಮಸ್ಥಳಕ್ಕೆ ಹೋಗಲು ಅಪ್ಪಣೆ ಆಗಿದೆ. ಕಾಂತಾರ 2 ಮಾಡುವ ಮುನ್ನ ಖಾವಂದರ(ಹೆಗ್ಗಡೆ) ಬಳಿ ಅನುಮತಿ ಕೇಳಲು ದೈವ ಅಪ್ಪಣೆ ‌ಕೊಟ್ಟಿದೆಯಂತೆ. ರಿಷಬ್ ಬಹಳ ಒಳ್ಳೆಯವರು, ಬಹಳ ಸಂತೋಷದಿಂದ ಎಲ್ಲರಲ್ಲೂ ಇದ್ದರು. ನೇಮೋತ್ಸವದ ವೇಳೆಯೂ ಬಹಳ ಶುದ್ದಾಚಾರದಿಂದ ಅವರು ನಡೆಸಿಕೊಟ್ಟಿದ್ದಾರೆ. ನಾನು ನೋಡಿದ ಮಟ್ಟಿಗೆ ಅವರ ಸೇವೆ ನಮಗೆ ಸಂತೋಷ ಆಗಿದೆ, ಉಳಿದಿದ್ದು ದೈವಕ್ಕೆ ಬಿಟ್ಟಿದ್ದು. ದೈವದ ವಿಷಯದಲ್ಲಿ ಕೆಟ್ಟದ್ದು ಮಾಡಬಾರದು, ತಿಳಿದು ಮಾಡಲೇ ಬಾರದು. ಕಾಂತಾರ ಭಾಗ 2 ಮಾಡಲು ಅವರು ಮತ್ತಷ್ಟು ಶುದ್ದಾಚಾರ ಪಾಲಿಸಬೇಕು. ಮೊದಲ ಚಿತ್ರದಲ್ಲಿ ಬಹಳ ಶುದ್ದಾಚಾರ ಪಾಲಿಸಿ ಭಕ್ತಿಯಿಂದ ‌ಮಾಡಿದ್ದಾರೆ. ಹಾಗಾಗಿ ಎರಡನೇ ಭಾಗವನ್ನೂ ಅವರು ಅಷ್ಟೇ ಶುದ್ದಾಚಾರದಿಂದ ಮಾಡ್ತಾರೆ ಅನ್ನೋ ನಂಬಿಕೆ ಇದೆ’ ಎಂದಿದ್ದಾರೆ ಉಮೇಶ್ ಪಂಬದ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago