Featured

ಕಾಂಬೋಡಿಯಾ : ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ – vishwanews24

ಕಾಂಬೋಡಿಯಾ  ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ

ನವದೆಹಲಿ/ನಾಮ್ ಪೆನ್: ಉದ್ಯೋಗ ಪಡೆಯುವ ಉತ್ಸಾಹದಲ್ಲಿ ಕಾಂಬೋಡಿಯಾದಲ್ಲಿ ಮೋಸದ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರನ್ನ ಇಲ್ಲಿನ ಭಾರತೀಯ ರಾಯಭಾರ ಕಚೇರಿ ರಕ್ಷಣೆ ಮಾಡಿದೆ. 60 ಮಂದಿಯ ಮೊದಲ ಬ್ಯಾಚ್‌ ಭಾರತಕ್ಕೆ ಮರಳಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ.

ಕಾಂಬೋಡಿಯಾ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಸಿಹಾನೌಕ್ವಿಲ್ಲೆನಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಜಿನ್‌ಬೆ-4 ಎಂಬ ಸ್ಥಳದಲ್ಲಿ ರಕ್ಷಣೆ ಭಾರತೀಯರನ್ನ  ಮಾಡಿದ್ದಾರೆ. ಅಲ್ಲದೇ ಇನ್ಮುಂದೆ ಉದ್ಯೋಗಕ್ಕಾಗಿ ಕಾಂಬೋಡಿಯಾಕ್ಕೆ ಬರುವ ಭಾರತೀಯರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅನುಮೋದಿಸಿದ ಅಧಿಕೃತ ಏಜೆಂಟರ ಮೂಲಕ ಮಾತ್ರವೇ ಉದ್ಯೋಗ ಪಡೆದುಕೊಳ್ಳಬೇಕು ಎಂದು ಸಲಹೆಯನ್ನೂ ನೀಡಿದೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಬೋಡಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು, ನಮ್ಮ ಅಧಿಕಾರಿಗಳ ತಂಡ ವಿದೇಶದಲ್ಲಿರುವ ಭಾರತೀಯರಿಗೆ ಯಾವಾಗಲು ಸಹಾಯಕ್ಕೆ ಬದ್ಧವಾಗಿದೆ. ಸದ್ಯ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿಯನ್ನ ರಕ್ಷಿಸಿದ್ದೇವೆ. ಅವರಿಂದು ಸ್ವದೇಶಕ್ಕೆ ಮರಳಿದ್ದಾರೆ. ಅದಕ್ಕಾಗಿ ನಮ್ಮ ಇಡೀ ಅಧಿಕಾರಿಗಳ ತಂಡಕ್ಕೆ ಧನ್ಯವಾದ ಸಲ್ಲಿಸುತ್ತೇವೆ ಎಂದು ಹೇಳಿದೆ.

ಜೊತೆಗೆ ಅವರು ಕಾಂಬೋಡಿಯಾದ ಸಿಹಾನೌಕ್ವಿಲ್ಲೆಯಿಂದ ನೋಮ್ ಪೆನ್‌ಗೆ ಕಳುಹಿಸಲು ಅಗತ್ಯ ದಾಖಲೆಗಳು ಹಾಗೂ ಇತರೇ ವ್ಯವಸ್ಥೆಗಳ ಸಹಾಯವನ್ನೂ ಅಧಿಕಾರಿಗಳು ಮಾಡಿಕೊಟ್ಟಿದ್ದಾರೆ. ಉದ್ಯೋಗ ಪಡೆಯುವ ಆಸೆಯಲ್ಲಿ ಮೋಸದ ಜಾಲಕ್ಕೆ ಸಿಲುಕಿದ್ದವರನ್ನ ರಕ್ಷಿಸಿ ಸಿಹಾನೌಕ್ವಿಲ್ಲೆ ನಿಂದ ನೋಮ್‌ಪೆನ್‌ಗೆ ಕಳುಹಿಸಲಾಗಿತ್ತು. ಬಳಿಕ ಪ್ರಯಾಣದ ದಾಖಲೆಗಳು ಸೇರಿದಂತೆ ಎಲ್ಲ ಸಹಾಯವನ್ನೂ ಒದಗಿಸಿಕೊಟ್ಟಿದೆ ಎಂದು ಕಚೇರಿ ತಿಳಿಸಿದೆ.

ಇದೇ ವೇಳೆ ಕಾಂಬೋಡಿಯಾದಲ್ಲಿ ಉದ್ಯೋಗ ಹುಡುಕುತ್ತಿರುವ ಭಾರತೀಯರು ಅನಧಿಕೃತ ಏಜೆಂಟ್‌ಗಳಿಗೆ ಬಲಿಯಾಗದಂತೆ ರಾಯಬಾರಿ ಕಚೇರಿ ಎಚ್ಚರಿಕೆ ನೀಡಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago