ಉಪ್ಪಿನಂಗಡಿ,: ಸುಮಾರು 500 ವರ್ಷಗಳ ಇತಿಹಾಸ ಹೊಂದಿರುವ ದೈವಸ್ಥಾನದ ಅವಶೇಷ ಹಾಗೂ ಮೂರ್ತಿ ಪತ್ತೆ ಇರುವ ಪ್ರಸಿದ್ಧ ದೈವಸ್ಥಾನವೊಂದು ಕಾಡಿನೊಳಗೆ ಬೆಳಿಕಿಗೆ ಬಂದ ಘಟನೆ ಪೆರ್ನೆ ಗ್ರಾಮದ ಕೊರತ್ತಿಕಟ್ಟೆ ಮಾಡತ್ತಾರು ಎಂಬಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಮಾಡತ್ತಾರುವಿನಲ್ಲಿ ನಡೆದ ಉತ್ಖನನದ ವೇಳೆ ಹಲವು ಮೂರ್ತಿಗಳು ಸಿಕ್ಕಿವೆ. ಮಾಡತ್ತಾರು ಆಸುಪಾಸಿನ ಊರುಗಳಲ್ಲಿ ಇತ್ತೀಚಿಗೆ ಅನಾರೋಗ್ಯ ಹಾಗೂ ಅಕಾಲಿಕ ಸಾವುಗಳು ಸಂಭವಿಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿತ್ತು. ಇದೇ ವೇಳೆ, 13ರಷ್ಟು ನಾಗರ ಹಾವುಗಳು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಈ ಎಲ್ಲಾ ಘಟನೆಗಳಿಂದ ಕಳವಳಗೊಂಡ ಗ್ರಾಮಸ್ಥರು ಒಟ್ಟು ಸೇರಿ ಅಷ್ಟಮಂಗಳ ಪ್ರಶ್ನೆಯ ಮೊರೆ ಹೋದರು. ಅಷ್ಠಮಂಗಳ ಪ್ರಶ್ನೆ ಇರಿಸಿದ ಖ್ಯಾತ ಜ್ಯೋತಿಷಿ ಕೆ.ವಿ. ಗಣೇಶ್ ಭಟ್ ಮುಳಿ, 500 ವರ್ಷಗಳ ಇತಿಹಾಸ ಹೊಂದಿರುವ ದೈವಸ್ಥಾನವೊಂದು ಕಾಡಿನೊಳಗೆ ಪಾಳು ಬಿದ್ದಿದೆ. ಈ ಪ್ರದೇಶದಲ್ಲಿದ್ದ ಭಂಡಾರದ ಮನೆಯೂ ನೆಲ ಸಮವಾಗಿದೆ. ಭಂಡಾರ ಮನೆಯಲ್ಲಿದ್ದ ದೈವದ ಮೂರ್ತಿಗಳೂ ಕೂಡಾ ಮಣ್ಣಿನಡಿ ಸೇರಿ ಕೊಂಡಿವೆ. ಈ ದೈವಸ್ಥಾನದ ಪುನರುತ್ಥಾನವಾಗಬೇಕು ಎಂದು ತಿಳಿಸಿದ್ದರು.
ಜ್ಯೋತಿಷಿ ಕೆ.ವಿ. ಗಣೇಶ್ ಭಟ್ ಮುಳಿ ಪ್ರಶ್ನೆಯಲ್ಲಿ ಹೇಳಿದಂತೆ ಗ್ರಾಮಸ್ಥರು ಒಟ್ಟು ಸೇರಿ ಪೆರ್ನೆ ಗ್ರಾಮದ ಕೊರತ್ತಿಕಟ್ಟೆ ಮಾಡತ್ತಾರು ಪ್ರದೇಶದ ಕಾಡಿನಲ್ಲಿ ಹುಡುಕಾಟ ನಡೆಸಿದಾಗ ಮರ ಗಿಡಗಳು ಬೆಳೆದಿರುವ ಸ್ಥಿತಿಯಲ್ಲಿ ದೈವ ಸ್ಥಾನದ ಕಟ್ಟಡದ ಪಳೆಯುಳಿಕೆಗಳು ಕಂಡು ಬಂದಿದೆ. ಪಿಲಿಚಾಮುಂಡಿ, ಕೊರತ್ತಿ, ಹಾಗೂ ಉಳ್ಳಾಕ್ಲು ದೈವದ ಮೂರೂ ಗುಡಿಗಳು ಕಾಲಾಂತರದಲ್ಲಿ ಶಿಥಿಲಗೊಂಡು ಕೇವಲ ಗುಡಿಯ ಪಂಚಾಂಗ ಮಾತ್ರ ಮರಗಿಡಗಳ ಮಧ್ಯೆ ಗೋಚರಿಸುತ್ತಿರುವುದು ಅಲ್ಲಿದ್ದ ಜನರನ್ನು ಅಚ್ಚರಿಗಳಿಸಿದೆ.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…