Featured

ಕಾಡಿನೊಳಗೆ 500 ವರ್ಷಗಳ ಇತಿಹಾಸ ಹೊಂದಿರುವ ದೈವಸ್ಥಾನದ ಅವಶೇಷ ಹಾಗೂ ಮೂರ್ತಿ ಪತ್ತೆ – Vishwanews24

ಉಪ್ಪಿನಂಗಡಿ,: ಸುಮಾರು 500 ವರ್ಷಗಳ ಇತಿಹಾಸ ಹೊಂದಿರುವ ದೈವಸ್ಥಾನದ ಅವಶೇಷ ಹಾಗೂ ಮೂರ್ತಿ ಪತ್ತೆ ಇರುವ ಪ್ರಸಿದ್ಧ ದೈವಸ್ಥಾನವೊಂದು ಕಾಡಿನೊಳಗೆ ಬೆಳಿಕಿಗೆ ಬಂದ ಘಟನೆ ಪೆರ್ನೆ ಗ್ರಾಮದ ಕೊರತ್ತಿಕಟ್ಟೆ ಮಾಡತ್ತಾರು ಎಂಬಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಮಾಡತ್ತಾರುವಿನಲ್ಲಿ ನಡೆದ ಉತ್ಖನನದ ವೇಳೆ ಹಲವು ಮೂರ್ತಿಗಳು ಸಿಕ್ಕಿವೆ. ಮಾಡತ್ತಾರು ಆಸುಪಾಸಿನ ಊರುಗಳಲ್ಲಿ ಇತ್ತೀಚಿಗೆ ಅನಾರೋಗ್ಯ ಹಾಗೂ ಅಕಾಲಿಕ ಸಾವುಗಳು ಸಂಭವಿಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿತ್ತು. ಇದೇ ವೇಳೆ, 13ರಷ್ಟು ನಾಗರ ಹಾವುಗಳು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಈ ಎಲ್ಲಾ ಘಟನೆಗಳಿಂದ ಕಳವಳಗೊಂಡ ಗ್ರಾಮಸ್ಥರು ಒಟ್ಟು ಸೇರಿ ಅಷ್ಟಮಂಗಳ ಪ್ರಶ್ನೆಯ ಮೊರೆ ಹೋದರು. ಅಷ್ಠಮಂಗಳ ಪ್ರಶ್ನೆ ಇರಿಸಿದ ಖ್ಯಾತ ಜ್ಯೋತಿಷಿ ಕೆ.ವಿ. ಗಣೇಶ್ ಭಟ್ ಮುಳಿ, 500 ವರ್ಷಗಳ ಇತಿಹಾಸ ಹೊಂದಿರುವ ದೈವಸ್ಥಾನವೊಂದು ಕಾಡಿನೊಳಗೆ ಪಾಳು ಬಿದ್ದಿದೆ. ಈ ಪ್ರದೇಶದಲ್ಲಿದ್ದ ಭಂಡಾರದ ಮನೆಯೂ ನೆಲ ಸಮವಾಗಿದೆ. ಭಂಡಾರ ಮನೆಯಲ್ಲಿದ್ದ ದೈವದ ಮೂರ್ತಿಗಳೂ ಕೂಡಾ ಮಣ್ಣಿನಡಿ ಸೇರಿ ಕೊಂಡಿವೆ. ಈ ದೈವಸ್ಥಾನದ ಪುನರುತ್ಥಾನವಾಗಬೇಕು ಎಂದು ತಿಳಿಸಿದ್ದರು.

ಜ್ಯೋತಿಷಿ ಕೆ.ವಿ. ಗಣೇಶ್ ಭಟ್ ಮುಳಿ ಪ್ರಶ್ನೆಯಲ್ಲಿ ಹೇಳಿದಂತೆ ಗ್ರಾಮಸ್ಥರು ಒಟ್ಟು ಸೇರಿ ಪೆರ್ನೆ ಗ್ರಾಮದ ಕೊರತ್ತಿಕಟ್ಟೆ ಮಾಡತ್ತಾರು ಪ್ರದೇಶದ ಕಾಡಿನಲ್ಲಿ ಹುಡುಕಾಟ ನಡೆಸಿದಾಗ ಮರ ಗಿಡಗಳು ಬೆಳೆದಿರುವ ಸ್ಥಿತಿಯಲ್ಲಿ ದೈವ ಸ್ಥಾನದ ಕಟ್ಟಡದ ಪಳೆಯುಳಿಕೆಗಳು ಕಂಡು ಬಂದಿದೆ. ಪಿಲಿಚಾಮುಂಡಿ, ಕೊರತ್ತಿ, ಹಾಗೂ ಉಳ್ಳಾಕ್ಲು ದೈವದ ಮೂರೂ ಗುಡಿಗಳು ಕಾಲಾಂತರದಲ್ಲಿ ಶಿಥಿಲಗೊಂಡು ಕೇವಲ ಗುಡಿಯ ಪಂಚಾಂಗ ಮಾತ್ರ ಮರಗಿಡಗಳ ಮಧ್ಯೆ ಗೋಚರಿಸುತ್ತಿರುವುದು ಅಲ್ಲಿದ್ದ ಜನರನ್ನು ಅಚ್ಚರಿಗಳಿಸಿದೆ.

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

9 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

10 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

10 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

10 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

10 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

10 hours ago