ಮಂಗಳೂರು: ಕಾನೂನಿಗೆ ಬೆಲೆ ನೀಡದವರಿಗೆ ಕಾನೂನನ್ನು ಅರ್ಥ ಮಾಡಿಸುವ ಭಾಷೆ ನಮಗೆ ತಿಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಗಲಭೆಯ ಕುರಿತು ಟ್ವೀಟ್ ಮಾಡಿರುವ ಅವರು, ” ಘಟನೆಯ ಹಿಂದೆ ಅರಾಜಕತೆ ಸೃಷ್ಟಿಸುವ ರಾಜಕೀಯ ಹುನ್ನಾರ ಇದೆ. ಇಂತಹ ಘಟನೆಗಳ ಹಿಂದೆ ಎಸ್ ಡಿ ಪಿ ಐ, ಪಿಎಫ್ ಐ ಶಾಮೀಲಾಗಿದೆ ಇದು ಪೂರ್ವನಿಯೋಜಿತ ಕೃತ್ಯವಾಗಿದೆ ಎಂದಿದ್ದಾರೆ.
ಟ್ವೀಟ್ ನಲ್ಲಿ “ಬೆಂಗಳೂರಿನ ಡಿ ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ನಡೆದ ನಿನ್ನೆಯ ಗಲಭೆಗೆ ಕಾರಣರಾದ ಸಮಾಜಘಾತುಕ ಶಕ್ತಿಗಳು ಮತ್ತು ಮತಾಂಧರು ಎಷ್ಟೇ ಪ್ರಬಲರಾಗಿದ್ದರೂ, ಅಂತವರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ನೀಡಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದೆ. ಇಂತಹ ಘಟನೆಗಳನ್ನು ನೋಡಿ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ.!!”
“ಕಾನೂನಿಗೆ ಬೆಲೆ ನೀಡದವರಿಗೆ ಅರ್ಥ ಮಾಡಿಸುವ ಭಾಷೆ ನಮಗೆ ತಿಳಿದಿದೆ. ಪೋಲಿಸ್ ಇಲಾಖೆ ಈಗಾಗಲೇ ಘಟನೆಗೆ ಸಂಭಂದಿಸಿದ ಹಲವರನ್ನು ಬಂಧಿಸಿದೆ, ವಿಚಾರಣೆ ನಡೆಯುತ್ತಿದೆ”ಎಂದಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…