ಮಂಗಳೂರು: ಕಾನೂನಿಗೆ ಬೆಲೆ ನೀಡದವರಿಗೆ ಕಾನೂನನ್ನು ಅರ್ಥ ಮಾಡಿಸುವ ಭಾಷೆ ನಮಗೆ ತಿಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಗಲಭೆಯ ಕುರಿತು ಟ್ವೀಟ್ ಮಾಡಿರುವ ಅವರು, ” ಘಟನೆಯ ಹಿಂದೆ ಅರಾಜಕತೆ ಸೃಷ್ಟಿಸುವ ರಾಜಕೀಯ ಹುನ್ನಾರ ಇದೆ. ಇಂತಹ ಘಟನೆಗಳ ಹಿಂದೆ ಎಸ್ ಡಿ ಪಿ ಐ, ಪಿಎಫ್ ಐ ಶಾಮೀಲಾಗಿದೆ ಇದು ಪೂರ್ವನಿಯೋಜಿತ ಕೃತ್ಯವಾಗಿದೆ ಎಂದಿದ್ದಾರೆ.
ಟ್ವೀಟ್ ನಲ್ಲಿ “ಬೆಂಗಳೂರಿನ ಡಿ ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ನಡೆದ ನಿನ್ನೆಯ ಗಲಭೆಗೆ ಕಾರಣರಾದ ಸಮಾಜಘಾತುಕ ಶಕ್ತಿಗಳು ಮತ್ತು ಮತಾಂಧರು ಎಷ್ಟೇ ಪ್ರಬಲರಾಗಿದ್ದರೂ, ಅಂತವರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ನೀಡಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದೆ. ಇಂತಹ ಘಟನೆಗಳನ್ನು ನೋಡಿ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ.!!”
“ಕಾನೂನಿಗೆ ಬೆಲೆ ನೀಡದವರಿಗೆ ಅರ್ಥ ಮಾಡಿಸುವ ಭಾಷೆ ನಮಗೆ ತಿಳಿದಿದೆ. ಪೋಲಿಸ್ ಇಲಾಖೆ ಈಗಾಗಲೇ ಘಟನೆಗೆ ಸಂಭಂದಿಸಿದ ಹಲವರನ್ನು ಬಂಧಿಸಿದೆ, ವಿಚಾರಣೆ ನಡೆಯುತ್ತಿದೆ”ಎಂದಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…