ಮಂಗಳೂರು: “ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಹಾಗೂ ಆದಾಯ ತೆರಿಗೆ ಇಲಾಖೆ ಮೂಲಕ ಬಂಧಿಸುವ ಷಡ್ಯಂತ್ರ ನಡೆಯುತ್ತಿದೆ. ಕಾಂಗ್ರೆಸ್ ನಾಯಕರನ್ನು ಕುತಂತ್ರದಿಂದ ಬಂಧಿಸುವ ಕೆಲಸ ಮಾಡಲಾಗುತ್ತಿದೆ” ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾನೂನಾತ್ಮಕವಾಗಿ ಡಿಕೆಶಿ ಅವರದ್ದೇ ರೀತಿ ಹೋರಾಟ ಮಾಡುತ್ತಾರೆ. ಡಿಕೆಶಿ ಜತೆ ನಾವಿದ್ದೇವೆ. ಕಾನೂನು ಹೋರಾಟದಲ್ಲಿಯೂ ಅವರು ಜಯಗಳಿಸುವ ವಿಶ್ವಾಸ ಇದೆ” ಎಂದರು. ”
ಯುಪಿಎ ಸರಕಾರ ಆಡಳಿತದಲ್ಲಿದ್ದಾಗ ಆರ್ಬಿಐನಲ್ಲಿ 3.90 ಲಕ್ಷ ಕೋಟಿ ರೂಪಾಯಿ ಹಣ ಆರ್ಬಿಐನಲ್ಲಿತ್ತು. ಅದರಲ್ಲಿ 1.76 ಲಕ್ಷ ಕೋಟಿ ಹಣವನ್ನು ಕೇಂದ್ರ ಪಡೆದಿದೆ. ದೇಶಕ್ಕಾಗಿ ನಾವು ಈ ರೀತಿ ಮಾಡುತ್ತಿದ್ದೇವೆ ಎಂದು ಹೇಳಬಹುದು. ಆದರೆ ಪಾರದರ್ಶಕ ಆಡಳಿತದ ಬಗ್ಗೆ ಮಾತನಾಡುವ ಕೇಂದ್ರ ಸರ್ಕಾರ ಈ ಹಣವನ್ನು ಯಾಕಾಗಿ ಪಡೆದಿದೆ ಎಂಬುದನ್ನು ಜನಸಾಮಾನ್ಯರಿಗೆ ತಿಳಿಸಬೇಕು. ದೇಶದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಹೂಡಿಕೆಗೆ ಮುಂದಾಗುವವರು ಹಿಂದೇಟು ಹಾಕುತ್ತಾರೆ” ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…