ಕಾನ್ಪುರ: ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ಕಾಯ್ದೆಯಡಿ ಮೊದಲ ತೀರ್ಪು ಪ್ರಕಟಿಸಲಾಗಿದ್ದು, ಕಾನ್ಪುರದ ಯುವಕನಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 30,000 ರೂಪಾಯಿ ದಂಡ ವಿಧಿಸಿ ಕಾನ್ಪುರ ನ್ಯಾಯಾಲಯ ತೀರ್ಪು ನೀಡಿದೆ.
ಈ ಘಟನೆ 2017ರ ಮೇ ತಿಂಗಳಲ್ಲಿ ನಡೆದಿತ್ತು. ಜಾವೇದ್ ಎಂಬ ಮುಸ್ಲಿಂ ಯುವಕ ತನ್ನನ್ನು ಹಿಂದೂ ಎಂದು ಪರಿಚಯಿಸಿಕೊಂಡು ಬಾಲಕಿಯೊಬ್ಬಳನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ. ನಂತರ ಆತ ಬಾಲಕಿಯನ್ನು ಕರೆದುಕೊಂಡು ಪರಾರಿಯಾಗಿದ್ದ. ತನಿಖೆ ಕೈಗೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯುವಕನನ್ನು ಬಂಧಿಸಿದ್ದರು.
ತನ್ನ ಭಾವಿ ಗಂಡನ ಮನೆಗೆ ತೆರಳಿದ್ದಾಗ ಆತ ತನ್ನ ನಿಜವಾದ ಗುರುತನ್ನು ಬಹಿರಂಗಪಡಿಸಿ, ನಿಖಾ ಮಾಡಿಕೊಳ್ಳೊಣ ಎಂದು ಹೇಳಿದ್ದ, ಅದಕ್ಕೆ ತಾನು ನಿರಾಕರಿಸಿದೆ ಎಂದು ಬಾಲಕಿ ಪೊಲೀಸರಿಗೆ ದೂರು ನೀಡಿದ್ದರು. ತನ್ನ ಮೇಲೆ ಯುವಕ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಳು. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…