Featured

ಕಾಪು:ಮೆಸ್ಕಾಂ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ – vishwanews24

ಕಾಪು:ಮೆಸ್ಕಾಂ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

24×7 ಮಾದರಿಯಲ್ಲಿ ಗ್ರಾಹಕರ ಸಮಸ್ಯೆಗಳಿಗೆ ಸ್ಪಂಧಿಸಲು ಮೆಸ್ಕಾಂ ಸಿಬಂದಿ ತಂಡ ಸದಾ ಸಿದ್ಧ..: ಉಡುಪಿ ಮೆಸ್ಕಾಂ ಅಧೀಕ್ಷಕ ಎಂಜಿನಿಯರ್‌ ದಿನೇಶ್‌ ಉಪಾಧ್ಯಾಯ

ಕಾಪು: ಮೆಸ್ಕಾಂ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆಗಳ ಬಗ್ಗೆ ಗ್ರಾಹಕರು 1912ಗೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ತಿಳಿಸಬಹುದಾಗಿದೆ. 24×7 ಮಾದರಿಯಲ್ಲಿ ಗ್ರಾಹಕರ ಸಮಸ್ಯೆಗಳಿಗೆ ಸ್ಪಂಧಿಸಲು ಮೆಸ್ಕಾಂ ಸಿಬಂದಿ ತಂಡ ಸದಾ ಸಿದ್ಧವಿದೆ ಎಂದು ಉಡುಪಿ ವಿಭಾಗದ ಮೆಸ್ಕಾಂ ಅಧೀಕ್ಷಕ ಎಂಜಿನಿಯರ್‌ ದಿನೇಶ್‌ ಉಪಾಧ್ಯಾಯ ಹೇಳಿದರು.

ಕಾಪು ಮೆಸ್ಕಾಂ ಕಚೇರಿಯಲ್ಲಿ ಬುಧವಾರ ನಡೆದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ಮೆಸ್ಕಾಂ ನಡೆಸುವ ಜನಸಂಪರ್ಕ ಸಭೆಯಲ್ಲಿ ಗ್ರಾಹಕರು ಭಾಗವಹಿಸುವುದು ಕಡಿಮೆಯಾಗುತ್ತಿದೆ. ಜನ ಸಂಪರ್ಕ ಸಭೆಯನ್ನು ಕೇವಲ ಕಾಟಾಚಾರಕ್ಕೆ ನಡೆಸದೇ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಸಭೆ ನಡೆಸುವಂತೆ ಸಭೆಯಲ್ಲಿ ಭಾಗವಹಿಸಿದ್ದ ಗ್ರಾಹಕ ಶ್ರೀನಿವಾಸ ಪೂಜಾರಿ, ಗುತ್ತಿಗೆದಾರ ಮುಶ್ತಾಕ್‌ ಸಾಹೇಬ್‌ ಒತ್ತಾಯಿಸಿದರು.
ಹಿರಿಯ ಅಧಿಕಾರಿ ದಿನೇಶ್‌ ಉಪಾಧ್ಯಾಯ ಅವರು, ಪಿಎಂ ಸೂರ್ಯ (ಸೋಲಾರ್‌ ಬೆಳಕು) ಯೋಜನೆಯನ್ನು ಗ್ರಾಹಕರಿಗೆ ತಲುಪಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಲ್ಲಿ ಮನವಿ ಮಾಡಿದರು. ಗುತ್ತಿಗೆದಾರ ಅನ್ವರ್‌ ಅಲಿ ಮಾತನಾಡಿ, ಈ ಯೋಜನೆಯಿಂದ ಗ್ರಾಹಕರಿಗೆ ಅನುಕೂಲವಿದ್ದರೂ, ಅದರಿಂದ ಹೆಚ್ಚಿನ ಲಾಭವಿಲ್ಲ. ನಮ್ಮದೇ ಹಣವನ್ನು ನಮಗೆ ನೀಡಿದಂತಾಗುತ್ತದೆ. ಇದರಿಂದ ಇಲಾಖೆ ಮತ್ತು ಸರಕಾರಕ್ಕೆ ಲಾಭವಿದೆಯೇ ಹೊರತು ಗ್ರಾಹಕರಿಗೆ ಯಾವುದೇ ಲಾಭವಿಲ್ಲ. ಈ ಬಗ್ಗೆ ವಿಶೇಷ ಪ್ಯಾಕೇಜ್‌ ನೀಡುವಂತೆ ಆಗ್ರಹಿಸಿದರು.

ಗ್ರಾಹಕ ಶ್ರೀನಿವಾಸ ಪೂಜಾರಿ ಕಟಪಾಡಿ ಅವರು, ಕಟಪಾಡಿ ಮೂಡಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಲ್ಲಿರುವ ಲೇಔಟ್‌ವೊಂದಕ್ಕೆ ತೆರಳುವ ದಾರಿಯಲ್ಲಿ ಕತ್ತಲಿದೆ. ಈ ಪ್ರದೇಶವು ಹೆಬ್ಟಾವು ಸಹಿತ ವಿಷಜಂತುಗಳು ಮತ್ತು ಕಾಡು ಪ್ರಾಣಿಗಳ ವಾಸಸ್ಥಾನದಂತಾಗಿದೆ ಎಂದು ದೂರಿದರು. ಅಧಿಕಾರಿಗಳು ಪ್ರತಿಕ್ರಿಯಿಸಿ, ಇದು ಗ್ರಾಮ ಪಂಚಾಯತ್‌ಗೆ ಸಂಬಂಧಿಸಿದ ವಿಚಾರವಾಗಿದ್ದು ಗ್ರಾಮ ಪಂಚಾಯತ್‌ಗೆ ಅರ್ಜಿ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಿದರು. ಮೆಸ್ಕಾಂ ಉಡುಪಿ ವಿಭಾಗದ ಕಾರ್ಯ ನಿರ್ವಾಹಕ ಎಂಜಿನಿಯರ್‌ ಪ್ರಸನ್ನ ಕುಮಾರ್‌, ಕಾಪು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಅರವಿಂದ ಕೆ.ಎಸ್‌., ಸಹಾಯಕ ಎಂಜಿನಿಯರ್‌ ಆನಂದ್‌ ಎಸ್‌., ಕಾಪು, ಕಟಪಾಡಿ, ಶಿರ್ವ, ಪಡುಬಿದ್ರಿ, ಮುದರಂಗಡಿ ಶಾಖಾಧಿಕಾರಿಗಳು ಮತ್ತು ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.

ಗ್ರಾಹಕರ ನಿರಾಸಕ್ತಿ : ಗುತ್ತಿಗೆದಾರರ ಸಮಸ್ಯೆಗಳ ಬಗ್ಗೆ ಚರ್ಚೆ
ಗ್ರಾಹಕರ ಅನುಪಸ್ಥಿತಿಯಲ್ಲಿ ನಡೆದ ಜನಸಂಪರ್ಕ ಸಭೆಯು ಗುತ್ತಿಗೆದಾರರಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಸೀಮಿತವಾಗಿ ನಡೆದು, ಬಳಿಕ ಮುಕ್ತಾಯ ಕ‌ಂಡಿತು. ಮುಂದಿನ ದಿನಗಳಲ್ಲಿ ಗ್ರಾಹಕರನ್ನು ಸೇರಿಸಿಕೊಂಡು ಸಭೆ ನಡೆಸುವ ಬಗ್ಗೆ ನಿರ್ಧರಿಸಲಾಯಿತು. ಗುತ್ತಿಗೆದಾರರಾದ ಅನ್ವರ್‌ ಅಲಿ, ವಿಜಯ್‌ ಮಾಬಿಯಾನ್‌, ನಾಗರಾಜ ಭಟ್‌ , ಮುಷ್ತಾಕ್‌ ಸಾಹೇಬ್‌ ಅವರು ವಿವಿಧ ಸಮಸ್ಯೆಗಳನ್ನು ಸಭೆಯ ಮುಂದಿರಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

23 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago