ಕಾಪು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
ಕಾಪು : ವಿಧಾನಸಭಾ ಕ್ಷೇತ್ರದಲ್ಲಿ ಅನುಷ್ಠಾನ ಹಂತದಲ್ಲಿರುವ ಸರಕಾರದ ವಿವಿಧ ಯೋಜನೆಗಳ ಪುನರ್ ಪರಿಶೀಲನೆಗಾಗಿ ಜಿಲ್ಕಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಭೇಟಿ ನೀಡಿದರು.
ಹೆಜಮಾಡಿ ಬಂದರು, ಕಾಪು ಬೀಚ್, ಕಾಪು ಮಿನಿ ವಿಧಾನಸೌಧ ಮತ್ತು ಬೃಹತ್ ಕುಡಿಯುವ ನೀರಿನ ಯೋಜನೆ ಮಂಜೂರಾಗಿದ್ದು,ಈ ಯೋಜನೆಗಳು
ಅನುಷ್ಠಾನ ಹಂತದಲ್ಲಿದೆ. ರಾಜ್ಯ ಸರಕಾರದ ಸೂಚನೆಯ ಮೇರೆಗೆ ಈ ಕಾಮಗಾರಿಗಳನ್ನು ಮುಂದುವರಿಸಲು ಪುನರಾಮರ್ಷೆ ನಡೆಸಲು ಇಲ್ಲಿಗೆ ಭೇಟಿ ನೀಡಿರುವುದಾಗಿ ಅವರು ತಿಳಿಸಿದರು.
ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಮಾತನಾಡಿ, ಕಾಪು ಕ್ಷೇತ್ರದಲ್ಲಿ ಹಲವಾರು ಯೋಜನೆಗಳು ಅನುಷ್ಟಾನ ಹಂತದಲ್ಲಿವೆ. ಹಿಂದಿನ ಯೋಜನೆಗಳ ಜೊತೆಗೆ ಹೊಸ ಯೋಜನೆಗಳ ಅನುಷ್ಟಾನಕ್ಕೆ ರಾಜ್ಯ ಹಣಕಾಸು ಇಲಾಖೆಯ ಮಂಜೂರಾತಿ ಅಗತ್ಯವಿದ್ದು, ಅದಕ್ಕಾಗಿ ಪುನರ್ ಪರಿಶೀಲನೆ ನಡೆಸಿದ್ದಾರೆ. ಶೀಘ್ರ ಈ ಯೋಜನೆಗಳು ಅನುಷ್ಟಾನ ಗೊಳ್ಳುವ ನಿರೀಕ್ಷೆಯಿದೆ ಎಂದರು.
ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಉಡುಪಿ ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಕ್, ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ಪುರಸಭೆ ಸದಸ್ಯ ಅನಿಲ್ ಕುಮಾರ್, ಮಮತಾ ಕೆ. ಸಾಲ್ಯಾನ್, ಕಾಪು
ಕಂದಾಯ ಪರಿವೀಕ್ಷಕ ಕೆ. ರವಿ ಶಂಕರ್, ಉಪ ತಹಶಿಲ್ದಾರ್ ಚಂದ್ರಹಾಸ ಬಂಗೇರ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ ನಾಯಕ್, ಮೆಸ್ಕಾಂ ಅಧಿಕಾರಿ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…