ಕಾಪು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
ಕಾಪು : ವಿಧಾನಸಭಾ ಕ್ಷೇತ್ರದಲ್ಲಿ ಅನುಷ್ಠಾನ ಹಂತದಲ್ಲಿರುವ ಸರಕಾರದ ವಿವಿಧ ಯೋಜನೆಗಳ ಪುನರ್ ಪರಿಶೀಲನೆಗಾಗಿ ಜಿಲ್ಕಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಭೇಟಿ ನೀಡಿದರು.
ಹೆಜಮಾಡಿ ಬಂದರು, ಕಾಪು ಬೀಚ್, ಕಾಪು ಮಿನಿ ವಿಧಾನಸೌಧ ಮತ್ತು ಬೃಹತ್ ಕುಡಿಯುವ ನೀರಿನ ಯೋಜನೆ ಮಂಜೂರಾಗಿದ್ದು,ಈ ಯೋಜನೆಗಳು
ಅನುಷ್ಠಾನ ಹಂತದಲ್ಲಿದೆ. ರಾಜ್ಯ ಸರಕಾರದ ಸೂಚನೆಯ ಮೇರೆಗೆ ಈ ಕಾಮಗಾರಿಗಳನ್ನು ಮುಂದುವರಿಸಲು ಪುನರಾಮರ್ಷೆ ನಡೆಸಲು ಇಲ್ಲಿಗೆ ಭೇಟಿ ನೀಡಿರುವುದಾಗಿ ಅವರು ತಿಳಿಸಿದರು.
ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಮಾತನಾಡಿ, ಕಾಪು ಕ್ಷೇತ್ರದಲ್ಲಿ ಹಲವಾರು ಯೋಜನೆಗಳು ಅನುಷ್ಟಾನ ಹಂತದಲ್ಲಿವೆ. ಹಿಂದಿನ ಯೋಜನೆಗಳ ಜೊತೆಗೆ ಹೊಸ ಯೋಜನೆಗಳ ಅನುಷ್ಟಾನಕ್ಕೆ ರಾಜ್ಯ ಹಣಕಾಸು ಇಲಾಖೆಯ ಮಂಜೂರಾತಿ ಅಗತ್ಯವಿದ್ದು, ಅದಕ್ಕಾಗಿ ಪುನರ್ ಪರಿಶೀಲನೆ ನಡೆಸಿದ್ದಾರೆ. ಶೀಘ್ರ ಈ ಯೋಜನೆಗಳು ಅನುಷ್ಟಾನ ಗೊಳ್ಳುವ ನಿರೀಕ್ಷೆಯಿದೆ ಎಂದರು.
ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಉಡುಪಿ ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಕ್, ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ಪುರಸಭೆ ಸದಸ್ಯ ಅನಿಲ್ ಕುಮಾರ್, ಮಮತಾ ಕೆ. ಸಾಲ್ಯಾನ್, ಕಾಪು
ಕಂದಾಯ ಪರಿವೀಕ್ಷಕ ಕೆ. ರವಿ ಶಂಕರ್, ಉಪ ತಹಶಿಲ್ದಾರ್ ಚಂದ್ರಹಾಸ ಬಂಗೇರ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ ನಾಯಕ್, ಮೆಸ್ಕಾಂ ಅಧಿಕಾರಿ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…