Featured

ಕಾಪುವಿನಲ್ಲಿ ಕೂಡಲೇ ಸಬ್ ರಿಜಿಸ್ಟ್ರಾರ್ ಕಛೇರಿ ತೆರೆಯಲು ಮೆಲ್ವಿನ್ ಡಿಸೋಜ ಆಗ್ರಹ – Vishwanews24

ಕಾಪುವಿನಲ್ಲಿ ಕೂಡಲೇ ಸಬ್ ರಿಜಿಸ್ಟ್ರಾರ್ ಕಛೇರಿ ತೆರೆಯಲು ಮೆಲ್ವಿನ್ ಡಿಸೋಜ ಆಗ್ರಹ

ಉಡುಪಿ: ಹೊಸ ಕಾಪು ತಾಲೂಕು ಆಗಿ ಸುಮಾರು 5 ವರ್ಷಗಳೇ ಕಳೆದರೂ ಇನ್ನೂ ಕೂಡಾ ಕಾಪುವಿನಲ್ಲಿ ಹೊಸ ಸಬ್‍ರಿಜಿಸ್ಟ್ರಾರ್ ಕಛೇರಿಯ ಆರಂಭ ಆಗದೇ ಇರುವುದನ್ನು ನ್ಯಾಯವಾದಿ ಮೆಲ್ವಿನ್ ಡಿಸೋಜರವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ.

ಕಾಪು ತಾಲೂಕಿನ ಜನರು ಉಡುಪಿ ಅಥವಾ ಮುಲ್ಕಿ ಸಬ್‍ರಿಜಿಸ್ಟ್ರಾರ್ ಕಛೇರಿಗೆ ಹೋಗಿ ದಸ್ತಾವೇಜು ನೊಂದಾಯಿಸಬೇಕಾಗಿದೆ. ಮುಲ್ಕಿಗೆ ಹೋಗಲು ಟೋಲ್ ಕಟ್ಟಬೇಕಾಗಿದೆ. ಕಾಪು ತಾಲೂಕಿಗೆ ಹೊಸ ಕಟ್ಟಡ ನಿರ್ಮಾಣವಾದರೂ ಕಾಮಗಾರಿ ಸಂಪೂರ್ಣ ಆಗದೇ ಇನ್ನೂ ಕೂಡಾ ಅಲ್ಲಿಗೆ ಯಾವುದೇ ಕಛೇರಿಗಳು ವರ್ಗಾವಣೆ ಆಗಿರುವುದಿಲ್ಲ. ಕಾಪು ತಾಲೂಕಿನ ಅನೇಕ ಕಡತಗಳು ಇನ್ನೂ ಕೂಡಾ ಉಡುಪಿ ತಾಲೂಕು ಕಛೇರಿಯಲ್ಲಿಯೇ ಇದ್ದು ಕಾಪುವಿಗೆ ವರ್ಗಾವಣೆ ಆಗದೇ ಇರುವುದು ಹಿಂದಿನ 5 ವರ್ಷ ಕೆಲಸ ಮಾಡಿದ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣವಾಗಿರುತ್ತದೆ. ಚುನಾವಣೆ ಹತ್ತಿರವಾಗುವ ಸಂದರ್ಭದಲ್ಲಿ ಕಾಪುವಿಗೆ ಹೊಸ ಸಬ್ ರಿಜಿಸ್ಟ್ರಾರ್ ಕಛೇರಿ ಸ್ಥಾಪನೆ ಎಂದು ಪತ್ರಿಕೆಯಲ್ಲಿ ಬಂದಿರುವುದು ಈಗ ರಚನೆಯಾಗದೇ ಇರುವುದು ಕೇವಲ ಚುನಾವಣಾ ಗಿಮಿಕ್ ಎಂದು ಸ್ಪಷ್ಟವಾಗಿದೆ. ಜನರು ಒಮ್ಮೆ ಉಡುಪಿಗೆ ಮತ್ತೊಮ್ಮೆ ಕಾಪುವಿಗೆ ಅಲೆದಾಡುವಂತಾಗಿದೆ. ಕೂಡಲೇ ಕಾಪುವಿನಲ್ಲಿ ಹೊಸ ಸಬ್ ರಿಜಿಸ್ಟ್ರಾರ್ ಕಛೇರಿ ಹಾಗೂ ಕಾಪು ತಾಲೂಕಿಗೆ ಸಿಗಬೇಕಾದ ಸೌಲಭ್ಯಗಳು ಕೂಡಲೇ ಸಿಗುವಂತೆ ಮಾಡಲು ಈಗಿನ ಶಾಸಕರು ಶ್ರಮವಹಿಸಬೇಕಾಗಿ ಅವರು ಆಗ್ರಹಿಸಿದ್ದಾರೆ.

ಕಾಪು ಕ್ಷೇತ್ರದ ಮಾಜಿ ಶಾಸಕರಾದ ವಿನಯ್ ಕುಮಾರ್ ಸೊರಕೆಯವರ ಕನಸಿನ ಕೂಸು ಕಾಪು ತಾಲೂಕು ಅವರ ಅನುಪಸ್ಥಿತಿಯಲ್ಲಿ ಸೌಲಭ್ಯ ವಂಚಿತವಾಗಿದೆ. ಕಾಪು ಕ್ಷೇತ್ರದ ಅಭಿವೃದ್ಧಿಯ ಹರಿಕಾರ ವಿನಯ್ ಕುಮಾರ್ ಸೊರಕೆಯವರು ಶಾಸಕರಾಗಿದ್ದಲ್ಲಿ ಕಾಪು ತಾಲೂಕು ಎಲ್ಲಾ ಸೌಲಭ್ಯಗಳನ್ನು ಹೊಂದಿದ ಹೊಸ ತಾಲೂಕು ಆಗಿ ಮೂಡಿ ಬರುವುದರಲ್ಲಿ ಯಾವುದೇ ಸಂಶಯ ಇರಲಿಲ್ಲ ಹಾಗೂ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕಂದಾಯ ಸಚಿವರಿಗೆ ಕೂಡಾ ವಿನಯ್ ಕುಮಾರ್ ಸೊರಕೆಯವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗುವುದು ಎಂದು ನ್ಯಾಯವಾದಿ ಹಾಗೂ ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರೂ ಆದ ಮೆಲ್ವಿನ್ ಡಿಸೋಜರವರು ಅವರು ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago