ಉಡುಪಿ: ನನ್ನ ಶಾಸಕತ್ವದ ಅವಧಿಯಲ್ಲಿ ಕಾಪುವಿನಲ್ಲಿ ಅಭಿವ್ರದ್ಧಿಯ ಮೈಲಿಗಲ್ಲನ್ನೇ ಸ್ಥಾಪಿಸಿದ್ದೀನಿ.. ಆದರೂ ನನ್ನನ್ನು ಕಳೆದ ಬಾರಿ ಸೋಲಿಸಿದ್ದೀರಿ. ಈ ಬಾರಿಯಾದರೂ ಕಾಪು ಕ್ಷೇತ್ರದಲ್ಲಿ ಪ್ರಾಮಾಣಿಕತೆ ಮತ್ತು ಅಭಿವೃದ್ಧಿಗೆ ಬೆಲೆ ಇದೆ ಅಂತಾ ಸಾಬೀತು ಮಾಡೋ ಕೆಲಸವನ್ನು ಮತದಾರರು ಮಾಡಲೇಬೇಕಿದೆ ಅಂತಾ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಉದ್ಯಾವರ ಬಿಲ್ಲವ ಮಹಾಮಂಡಲದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಹಿರಿಯರ ಆಶೀರ್ವಾದ ಪಡೆದು ಮಾತನಾಡಿದರು.
ಈ ಬಾರಿ ಕಾಪು ಕ್ಷೇತ್ರ ಪ್ರಾಮಾಣಿಕತೆ ಅಭಿವೃದ್ಧಿ ಮತ್ತು ಹಣದ ಹೊಳೆಯ ನಡುವಿನ ಚುನಾವಣೆಯಾಗಿ ಮಾರ್ಪಟ್ಟಿದೆ. ಕಾಪುವಿನ ಮತದಾರರು ಬಹಳಷ್ಟು ಪ್ರಬುದ್ಧರಿದ್ದಾರೆ. ಈ ಬಾರಿ ಪ್ರಾಮಾಣಿಕತೆ ಮತ್ತು ಅಭಿವ್ರದ್ಧಿಗೆ ಮತ ಹಾಕುತ್ತಾರೆ ಅನ್ನೋ ನಂಬಿಕೆ ನನಗಿದೆ. ಸೋತ ಮೇಲೂ ಐದು ವರ್ಷಗಳ ಜನರ ನಡುವೆ ಇದ್ದು ಜನತೆಯ ಎಲ್ಲಾ ಆಶೋತ್ತರಗಳಿಗೆ ಸ್ಪಂದಿಸಿದೀನಿ. ನಾರಾಯಣಗುರುಗಳ ವಿಚಾರದಲ್ಲ ಜಿಲ್ಲೆಯಾದ್ಯಂತ ಬಹಳಷ್ಟು ಹೋರಾಟ ಸಂಘಟಿಸಿದ್ದೀನಿ.. ನಾರಾಯಣಗುರುಗಳ ಸ್ಥಬ್ಬ ಚಿತ್ರದ ವಿಚಾರದಲ್ಲಿ, ಪಠ್ಯ ಪುಸ್ತಕದ ವಿಚಾರದಲ್ಲಿ ಜಿಲ್ಲೆಯ ಮೂಲೆ ಮೂಲೆಯಲ್ಲಿ ಬಿಲ್ಲವ ಮುಖಂಡರ ಜೊತೆ ಇದ್ದು ಹೋರಾಟವನ್ನು ಸಂಘಟಿಸಿದ್ದೀನಿ. ಈ ಬಾರಿ ನನ್ನ ಕೊನೆಯಚುನಾವಣೆ.. ನನ್ನನ್ನು ಗೆಲ್ಲಿಸಿ ಜನತೆಯ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುತ್ತಿರಿ ಅನ್ನೊ ನಂಬಿಕರ ಇದೆ ಅಂತಾ ಸೊರಕೆ ಹೇಳಿದ್ದಾರೆ. ಒಂದು ವೇಳೆ ಗೆದ್ದು ಬಂದಲ್ಲಿ ಸಮಾಜದ ಎಲ್ಲಾ ವರ್ಗದವರ ಪರ ನಿಂತು ಸಮಾನತೆಯಿಂದ ಕೆಲಸ ಮಾಡ್ತಿನಿ ವಾಗ್ದಾನ ಮಾಡ್ತಿನಿ ಅಂತಾ ಸೊರಕೆ ಹೇಳಿದರು.
ಉದ್ಯಾವರ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಸತೀಶ್ ಕೋಟ್ಯಾನ್, ಕಾರ್ಯದರ್ಶಿ ಆನಂದ ಉದ್ಯಾವರ, ಯುವ ಜನ ಕಲಾಮಂಡಳಿ ಅಧ್ಯಕ್ಷ ಶಿವರಾಮ ಗುರಿಕಾರರರು, ಬಿಲ್ಲವ ಮಖಂಡರು , ಮಹಿಳಾ ಘಟಕದ ಎಲ್ಲಾ ಮುಖಂಡರು , ಕಾಂಗ್ರೆಸ್ ಮುಖಂಡರಾದ ಉದ್ಯಾವರ ನಾಗೇಶ್ ಕುಮಾರ್, ಗಿರೀಶ್ ಕುಮಾರ್, ರಾಯಸ್ ಫೆರ್ನಾಂಡೀಸ್, ಅಬೀದ್ ಅಲಿ, ಶೇಖರ ಕೋಟ್ಯಾನ್, ಸಾಯಿನಾಥ್, ನಿತೀನ್ ಸಾಲ್ಯಾನ್, ಸೊಹೇಲ್ ರಹಮತುಲ್ಲಾ, ಭಾಸ್ಕರ ಕೋಟ್ಯಾನ್, ಸಚಿನ್, ರಿಯಾಝ್ ಪಳ್ಳಿ, ಮೇರಿ ಡಿಸೋಜ, ಪೂರ್ಣಿಮಾ, ಆಶಾ, ಹೆಲೆನ್ ಫೆರ್ನಾಂಡೀಸ್, ದಿವಾಕರ ಬೊಳ್ಜೆ, ಸರೋಜ, ಗಿರೀಶ್ ಗುಡ್ಡೆಯಂಗಡಿ, ಮೀರಾ, ದಯಾನಂದ, ನಯಾಝ್ ಪಳ್ಳಿ, ಅನ್ಸರ್, ಆಶಾ ಸುರೇಶ್, ಸತೀಶ್ ಉಪಸ್ಥಿತರಿದ್ದರು.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…