Featured

ಕಾಪುವಿನಲ್ಲಿ ಪ್ರಾಮಾಣಿಕತೆ ಮತ್ತುಅಭಿವೃದ್ಧಿಗೆ ಬೆಲೆ ಇದೆ ಅಂತ ನಂಬಿದ್ದೇನೆ : ವಿನಯ್ ಕುಮಾರ್ ಸೊರಕೆ – Vishwanews24

ನನ್ನ ಶಾಸಕತ್ವದ ಅವಧಿಯಲ್ಲಿ ಕಾಪುವಿನಲ್ಲಿ ಅಭಿವ್ರದ್ಧಿಯ ಮೈಲಿಗಲ್ಲನ್ನೇ ಸ್ಥಾಪಿಸಿದ್ದೀನಿ , ಆದರೂ ನನ್ನನ್ನು ಸೋಲಿಸಿದ್ದೀರಿ..

ಈ ಬಾರಿಯಾದರೂ ನನ್ನನ್ನು ಗೆಲ್ಲಿಸಿ ಜನತೆಯ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುತ್ತಿರಿ ಅನ್ನೊ ನಂಬಿಕೆ ಇದೆ..

ಗೆದ್ದು ಬಂದಲ್ಲಿ ಸಮಾಜದ ಎಲ್ಲಾ ವರ್ಗದವರ ಪರ ನಿಂತು ಸಮಾನತೆಯಿಂದ ಕೆಲಸ ಮಾಡ್ತಿನಿ..

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ..

ಉಡುಪಿ: ನನ್ನ ಶಾಸಕತ್ವದ ಅವಧಿಯಲ್ಲಿ ಕಾಪುವಿನಲ್ಲಿ ಅಭಿವ್ರದ್ಧಿಯ ಮೈಲಿಗಲ್ಲನ್ನೇ ಸ್ಥಾಪಿಸಿದ್ದೀನಿ.. ಆದರೂ ನನ್ನನ್ನು ಕಳೆದ ಬಾರಿ ಸೋಲಿಸಿದ್ದೀರಿ. ಈ ಬಾರಿಯಾದರೂ ಕಾಪು ಕ್ಷೇತ್ರದಲ್ಲಿ ಪ್ರಾಮಾಣಿಕತೆ ಮತ್ತು ಅಭಿವೃದ್ಧಿಗೆ ಬೆಲೆ ಇದೆ ಅಂತಾ ಸಾಬೀತು ಮಾಡೋ ಕೆಲಸವನ್ನು ಮತದಾರರು ಮಾಡಲೇಬೇಕಿದೆ ಅಂತಾ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.

ಉದ್ಯಾವರ ಬಿಲ್ಲವ ಮಹಾಮಂಡಲದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಹಿರಿಯರ ಆಶೀರ್ವಾದ ಪಡೆದು ಮಾತನಾಡಿದರು.

ಈ ಬಾರಿ ಕಾಪು ಕ್ಷೇತ್ರ ಪ್ರಾಮಾಣಿಕತೆ ಅಭಿವೃದ್ಧಿ ಮತ್ತು ಹಣದ ಹೊಳೆಯ ನಡುವಿನ ಚುನಾವಣೆಯಾಗಿ ಮಾರ್ಪಟ್ಟಿದೆ. ಕಾಪುವಿನ ಮತದಾರರು ಬಹಳಷ್ಟು ಪ್ರಬುದ್ಧರಿದ್ದಾರೆ. ಈ ಬಾರಿ ಪ್ರಾಮಾಣಿಕತೆ ಮತ್ತು ಅಭಿವ್ರದ್ಧಿಗೆ ಮತ ಹಾಕುತ್ತಾರೆ ಅನ್ನೋ ನಂಬಿಕೆ ನನಗಿದೆ. ಸೋತ ಮೇಲೂ ಐದು ವರ್ಷಗಳ ಜನರ ನಡುವೆ ಇದ್ದು ಜನತೆಯ ಎಲ್ಲಾ ಆಶೋತ್ತರಗಳಿಗೆ ಸ್ಪಂದಿಸಿದೀನಿ. ನಾರಾಯಣಗುರುಗಳ ವಿಚಾರದಲ್ಲ ಜಿಲ್ಲೆಯಾದ್ಯಂತ ಬಹಳಷ್ಟು ಹೋರಾಟ ಸಂಘಟಿಸಿದ್ದೀನಿ.. ನಾರಾಯಣಗುರುಗಳ ಸ್ಥಬ್ಬ ಚಿತ್ರದ ವಿಚಾರದಲ್ಲಿ, ಪಠ್ಯ ಪುಸ್ತಕದ ವಿಚಾರದಲ್ಲಿ ಜಿಲ್ಲೆಯ ಮೂಲೆ ಮೂಲೆಯಲ್ಲಿ ಬಿಲ್ಲವ ಮುಖಂಡರ ಜೊತೆ ಇದ್ದು ಹೋರಾಟವನ್ನು ಸಂಘಟಿಸಿದ್ದೀನಿ. ಈ ಬಾರಿ ನನ್ನ ಕೊನೆಯಚುನಾವಣೆ.. ನನ್ನನ್ನು ಗೆಲ್ಲಿಸಿ ಜನತೆಯ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುತ್ತಿರಿ ಅನ್ನೊ ನಂಬಿಕರ ಇದೆ ಅಂತಾ ಸೊರಕೆ ಹೇಳಿದ್ದಾರೆ. ಒಂದು ವೇಳೆ ಗೆದ್ದು ಬಂದಲ್ಲಿ ಸಮಾಜದ ಎಲ್ಲಾ ವರ್ಗದವರ ಪರ ನಿಂತು ಸಮಾನತೆಯಿಂದ ಕೆಲಸ ಮಾಡ್ತಿನಿ ವಾಗ್ದಾನ ಮಾಡ್ತಿನಿ ಅಂತಾ ಸೊರಕೆ ಹೇಳಿದರು.

ಉದ್ಯಾವರ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಸತೀಶ್ ಕೋಟ್ಯಾನ್, ಕಾರ್ಯದರ್ಶಿ ಆನಂದ ಉದ್ಯಾವರ, ಯುವ ಜನ ಕಲಾಮಂಡಳಿ ಅಧ್ಯಕ್ಷ ಶಿವರಾಮ ಗುರಿಕಾರರರು, ಬಿಲ್ಲವ ಮಖಂಡರು , ಮಹಿಳಾ ಘಟಕದ ಎಲ್ಲಾ ಮುಖಂಡರು , ಕಾಂಗ್ರೆಸ್ ಮುಖಂಡರಾದ ಉದ್ಯಾವರ ನಾಗೇಶ್ ಕುಮಾರ್, ಗಿರೀಶ್ ಕುಮಾರ್, ರಾಯಸ್ ಫೆರ್ನಾಂಡೀಸ್, ಅಬೀದ್ ಅಲಿ, ಶೇಖರ ಕೋಟ್ಯಾನ್, ಸಾಯಿನಾಥ್, ನಿತೀನ್ ಸಾಲ್ಯಾನ್, ಸೊಹೇಲ್ ರಹಮತುಲ್ಲಾ, ಭಾಸ್ಕರ ಕೋಟ್ಯಾನ್, ಸಚಿನ್, ರಿಯಾಝ್ ಪಳ್ಳಿ, ಮೇರಿ ಡಿಸೋಜ, ಪೂರ್ಣಿಮಾ, ಆಶಾ, ಹೆಲೆನ್ ಫೆರ್ನಾಂಡೀಸ್, ದಿವಾಕರ ಬೊಳ್ಜೆ, ಸರೋಜ, ಗಿರೀಶ್ ಗುಡ್ಡೆಯಂಗಡಿ, ಮೀರಾ, ದಯಾನಂದ, ನಯಾಝ್ ಪಳ್ಳಿ, ಅನ್ಸರ್, ಆಶಾ ಸುರೇಶ್, ಸತೀಶ್ ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago