Featured

ಕಾಪುವಿನಲ್ಲಿ ವಶಕ್ಕೆ ಪಡೆದ ಎಲ್ಲಾ ಗೋವುಗಳು ಗೋಶಾಲೆಗೆ ಸಾಗಿಸುವ ಗೋವುಗಳು: ಜಯಪ್ರಕಾಶ್ ಪ್ರಭು

ಕಾಪುವಿನಲ್ಲಿ ವಶಕ್ಕೆ ಪಡೆದ ಎಲ್ಲಾ ಗೋವುಗಳು ಗೋಶಾಲೆಗೆ ಸಾಗಿಸುವ ಗೋವುಗಳು: ಜಯಪ್ರಕಾಶ್ ಪ್ರಭು

ಕಾಪು: ಇಂದು ಬೆಳ್ಳಗೆ ಕೆಲ ಹೊತ್ತು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದ್ದ ಸುಮಾರು ಮೂರು ಲಾರಿಗಳಲ್ಲಿ ಸಾಗಿಸುತ್ತಿದ್ದ ಗೋವುಗಳನ್ನು ಕಾಪು ಪೋಲಿಸರು ವಶಕ್ಕೆ ಪಡೆದ ವಿಚಾರಕ್ಕೆ ಕಡೆಗೂ ತೆರೆ ಬಿದ್ದಂತಾಗಿದೆ.

ಈ ಗೋವುಗಳನ್ನ ಕೇರಳದ ವಯನಾಡಿನಿಂದ ಧರ್ಮ ಫೌಂಡೆಶನ್ ಸಂಸ್ಥೆಯ ವತಿಯಿಂದ ಉಡುಪಿ‌ ಜಿಲ್ಲೆಯ ಬಂಟಕಲ್ಲು ಅರಸಿಕಟ್ಟೆಯಲ್ಲಿರುವ ಗೋಶಾಲೆಯಲ್ಲಿ ಸಾಕುವ ಉದ್ದೇಶದಿಂದ ಕೊಂಡಯ್ಯಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಗೋಶಾಲೆಗೆ ಭೇಟಿ ನೀಡಿ‌ ಮತ್ತು ದಾಖಲೆ ಪರೀಶಿಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ಯಾವುದೇ ಕಸಾಯಿಖಾನೆಗೆ ಸಾಗುವ ಗೋವುಗಳು ಅಲ್ಲ ಎಂಬ ದಿಟವಾಗಿದೆ.

ಈ‌ ಬಗ್ಗೆ ವಿಶ್ವ ಹಿಂದೂ ಪರಿಷತ್ ನ ಪ್ರಖಂಡ ಸಂಚಾಲಕ ಜಯಪ್ರಕಾಶ್ ಪ್ರಭುರ ಹೇಳಿಕೆಯ ಪ್ರಕಾರ ಎಲ್ಲಾ ಗೋವುಗಳು ಸುರಕ್ಷಿತವಾಗಿದೆ ಮತ್ತು ಅಸ್ವಸ್ಥತಗೊಂಡ ಗೋವುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ ಮತ್ತು ಸದುದ್ದೇಶದಿಂದ ಮತ್ತು ಸಾಕುವ ಉದ್ದೇಶದಿಂದ ಗೋವುಗಳನ್ನು ತರಲಾಗಿತ್ತು ಎಂದರು.

ಧರ್ಮ ಫೌಂಡೇಶನ್ ನ ಅಧ್ಯಕ್ಷರಾಗಿ ಪಂದಳ ರಾಜಕಾರ್ಯನಿರ್ವಹಿಸುತ್ತಿದ್ದು ,ಉಡುಪಿಯ ಜಿಲ್ಲಾ ಅಧ್ಯಕ್ಷರಾಗಿ ಗಿರೀಶ್ ಜಿ ಕಾರ್ಯನಿರ್ವಹಿಸುತ್ತಿದ್ದಾರೆ.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

22 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago