ಕಾಪುವಿನಲ್ಲಿ ವಶಕ್ಕೆ ಪಡೆದ ಎಲ್ಲಾ ಗೋವುಗಳು ಗೋಶಾಲೆಗೆ ಸಾಗಿಸುವ ಗೋವುಗಳು: ಜಯಪ್ರಕಾಶ್ ಪ್ರಭು
ಕಾಪು: ಇಂದು ಬೆಳ್ಳಗೆ ಕೆಲ ಹೊತ್ತು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದ್ದ ಸುಮಾರು ಮೂರು ಲಾರಿಗಳಲ್ಲಿ ಸಾಗಿಸುತ್ತಿದ್ದ ಗೋವುಗಳನ್ನು ಕಾಪು ಪೋಲಿಸರು ವಶಕ್ಕೆ ಪಡೆದ ವಿಚಾರಕ್ಕೆ ಕಡೆಗೂ ತೆರೆ ಬಿದ್ದಂತಾಗಿದೆ.
ಈ ಗೋವುಗಳನ್ನ ಕೇರಳದ ವಯನಾಡಿನಿಂದ ಧರ್ಮ ಫೌಂಡೆಶನ್ ಸಂಸ್ಥೆಯ ವತಿಯಿಂದ ಉಡುಪಿ ಜಿಲ್ಲೆಯ ಬಂಟಕಲ್ಲು ಅರಸಿಕಟ್ಟೆಯಲ್ಲಿರುವ ಗೋಶಾಲೆಯಲ್ಲಿ ಸಾಕುವ ಉದ್ದೇಶದಿಂದ ಕೊಂಡಯ್ಯಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಗೋಶಾಲೆಗೆ ಭೇಟಿ ನೀಡಿ ಮತ್ತು ದಾಖಲೆ ಪರೀಶಿಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ಯಾವುದೇ ಕಸಾಯಿಖಾನೆಗೆ ಸಾಗುವ ಗೋವುಗಳು ಅಲ್ಲ ಎಂಬ ದಿಟವಾಗಿದೆ.
ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ನ ಪ್ರಖಂಡ ಸಂಚಾಲಕ ಜಯಪ್ರಕಾಶ್ ಪ್ರಭುರ ಹೇಳಿಕೆಯ ಪ್ರಕಾರ ಎಲ್ಲಾ ಗೋವುಗಳು ಸುರಕ್ಷಿತವಾಗಿದೆ ಮತ್ತು ಅಸ್ವಸ್ಥತಗೊಂಡ ಗೋವುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ ಮತ್ತು ಸದುದ್ದೇಶದಿಂದ ಮತ್ತು ಸಾಕುವ ಉದ್ದೇಶದಿಂದ ಗೋವುಗಳನ್ನು ತರಲಾಗಿತ್ತು ಎಂದರು.
ಧರ್ಮ ಫೌಂಡೇಶನ್ ನ ಅಧ್ಯಕ್ಷರಾಗಿ ಪಂದಳ ರಾಜಕಾರ್ಯನಿರ್ವಹಿಸುತ್ತಿದ್ದು ,ಉಡುಪಿಯ ಜಿಲ್ಲಾ ಅಧ್ಯಕ್ಷರಾಗಿ ಗಿರೀಶ್ ಜಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…